
ಕೊಕ್ಕಡ: ಬಯಲು ಆಲಯ ಗಣಪ ಎಂದೇ ಪ್ರಸಿದ್ಧಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ 75 ಕೆ.ಜಿ.ಯ ಘಂಟೆಯನ್ನು ಪುತ್ತೂರಿನ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆ ಜೂ.10 ರಂದು ಅರ್ಪಿಸಿದರು.


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸೌತಡ್ಕ ದೇವಸ್ಥಾನಕ್ಕೆ ಘಂಟೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಮತ್ತು ಬಂಧು ಮಿತ್ರರು ಉಪಸ್ಥಿತರಿದ್ದರು.