ಧರ್ಮಸ್ಥಳ: ಕೃಷಿ ಹಾಗೂ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ವಿಶೇಷ ಸಾಧನೆಗೈದ ಧರ್ಮಸ್ಥಳ ಅಜೆಕುರಿ ನಿವಾಸಿ ಪಿ.ನಾರಾಯಣ ರಾವ್ (85 ವರ್ಷ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜೂ.12 ರಂದು ನಿಧನರಾದರು.
ಧರ್ಮಸ್ಥಳದಲ್ಲಿ ಕಳೆದ 40 ವರ್ಷಗಳಿಂದ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಪಿ.ನಾರಾಯಣ ರಾವ್ ಅವರು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಕೃಷಿ ಮತ್ತು ಹೈನುಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಇದರಲ್ಲಿ ವಿಶೇಷ ಸಾಧನೆ ಮಾಡಿದ್ದರು.
ಮೃತರು ಪತ್ನಿ ಕಮಲ, ಆರು ಮಕ್ಕಳಾದ ಕೃಷ್ಣ, ಸದಾಶಿವ, ಪ್ರಕಾಶ, ದಿನೇಶ್, ವಿಜಯ, ಹರಿಣಾಕ್ಷಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ಮೃತರ ಮನೆಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ವಿಮಲ, ಸದಸ್ಯ ಹರ್ಷಿತ್ ಹಾಗೂ ಊರವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.