23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನವು ಜೂ.11 ರಂದು ವಿಶ್ವನಾಥ ಪೂಜಾರಿ ಮೈರಬೆಟ್ಟು ಇವರ ಮನೆಯಲ್ಲಿ ಜರಗಿತು.

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ದ. ಕ. ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರು ಪ್ರಭಾಕರ್ ಎಚ್. ದೀಪ ಬೆಳಗಿಸಿ ಚಾಲನೆ ನೀಡಿದರು. ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ ಕುಂಡಾಜೆ, ನಿರ್ದೇಶಕರಾದ ಕೃಷ್ಣ ಶೆಟ್ಟಿ ಉಮಾನೊಟ್ಟು, ದಿನೇಶ್ ಹುಲಿಮೇರು, ಉಮೇಶ್ ಶೆಟ್ಟಿ ಪಾಲ್ಯ, ಕೇಶವ ಶೆಟ್ಟಿ, ಸುಮಿತ್ರಾ ಶೆಟ್ಟಿ ಹಾಗೂ ವೇಣೂರು ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಪ್ರದೀಪ್ ಪಾಣಿಮೇರು ಸ್ವಾಗತಿಸಿದರು. ನಂತರ ಆರಂಬೋಡಿ ಗ್ರಾಮ ವ್ಯಾಪ್ತಿಯ ಎಲ್ಲಾ ರಾಸುಗಳಿಗೆ ಚರ್ಮಗಂಟು ಮತ್ತು ಕಾಲುಬಾಯಿ ರೋಗದ ಲಸಿಕೆ ನೀಡಲಾಯಿತು.

Related posts

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya
error: Content is protected !!