September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಹತ್ತು ದಿನಗಳ ಯೋಗ ತರಬೇತಿ ಶಿಬಿರ ಜೂ.11ರಂದು ಉದ್ಘಾಟನೆಗೊಂಡಿತು.

ಉಜಿರೆಯ ಶ್ರೀ ಧ.ಮಂ. ನ್ಯಾಚುರೋಪತಿ ಕಾಲೇಜಿನ ಉಪಪ್ರಾಂಶುಪಾಲೆ ಸುಜಾತ ಉದ್ಘಾಟಿಸಿ ಮಾತನಾಡಿ, ಯೋಗವು ಈ ಕ್ಷಣದ ಬದುಕನ್ನು ಮತ್ತು ವರ್ತಮಾನವನ್ನು ಪ್ರತ್ಯಕ್ಷವಾಗಿ ತೋರಿಸಲು ಅತ್ಯುತ್ತಮ ಸಾಧನ ಎಂದರು.

ಶಾಲಾ ಮುಖ್ಯೋಪಾಧ್ಯಾಯ ಕೆ. ಸುರೇಶ್ ಮಾತನಾಡಿ, ಯೋಗ ಮಾನವನ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತದೆ. ದಿನನಿತ್ಯದ ಜೀವನ ಶೈಲಿಗೆ ಯೋಗ ಅತ್ಯಗತ್ಯ ಎಂದರು.

ಯೋಗ ತರಬೇತುದಾರರು, ಶ್ರೀ ಧ.ಮಂ. ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿಗಳಾದ ಕ್ಷಮಾ ಮತ್ತು ಅಮೃತವರ್ಷಿಣಿ, ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕರಾದ ಚಂದ್ರಶೇಖರ ಸ್ವಾಗತಿಸಿ, ಅರ್ಚನಾ ವಂದಿಸಿ, ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya
error: Content is protected !!