23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾ ಸಾಗರ ಕ್ಯಾಂಪಸ್ ಗುರುವಾಯನಕೆರೆಯಲ್ಲಿ ಹೆತ್ತವರ ಒರಿಯಂಟೇಶನ್ ನಾಂದಿ – 2025 ‘ನಡೆಯಿತು.

ಆಪ್ತ ಸಲಹೆಗಾರ್ತಿ ಡಾ.ಸ್ವಾತಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಗುವಿನ ವಯಸ್ಸಿಗೆ ಅನುಗುಣವಾಗಿ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಬೆಳೆಯಲು ಬೇಕಾದ ಪರಿಸರವನ್ನು ನಿರ್ಮಿಸುವ ಜವಾಬ್ದಾರಿ ಪೋಷಕರದ್ದಾಗಿದೆ. ಮಗು ವಯಸ್ಸಿಗೆ ತಕ್ಕಂತೆ ಪ್ರೌಢಿಮೆ ರೂಢಿಸಿಕೊಳ್ಳುವ ಹಾಗೂ ಮುಂದಿನ ದಿನಗಳಲ್ಲಿ ಜವಾಬ್ದಾರಿಯುತ ವ್ಯಕ್ತಿಯಾಗಿ ಬೆಳೆಯಬೇಕಾದಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಹಳ ಮಹತ್ವದ್ದು.ಮಕ್ಕಳ ಬೆಳವಣಿಗೆಯ ಸಂದರ್ಭದಲ್ಲಿ ಪೋಷಕರು ವಿಶೇಷ ಕಾಳಜಿ ವಹಿಸಬೇಕು. ಮಕ್ಕಳ ಜೊತೆ ತಾಳ್ಮೆ ಕಳೆದುಕೊಳ್ಳದೆ ವರ್ತಿಸಬೇಕಾದರೆ ಹೇಗಿರಬೇಕು. ಮಕ್ಕಳಿಗೆ ಅವರೊಂದಿಗೆ ಪೋಷಕರು ಕಳೆಯುವ ಸಮಯವೇ ಅತಿ ದೊಡ್ಡ ಉಡುಗೊರೆ ಎಂದು ಹೇಳಿದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಎಂ ಮಾತನಾಡಿ ಸಾಧಕನಾಗಬೇಕಿದ್ದರೆ ಪರಿಶ್ರಮ ಪಡಬೇಕು. ನಿರಂತರವಾದ ಪರಿಶ್ರಮಕ್ಕೆ ನಿಜವಾದ ಗೌರವ ಸಲ್ಲುತ್ತದೆ. ಅಂತ ಸಾಧಕರಾಗಲು ನಮ್ಮ ಮಕ್ಕಳನ್ನು ಪ್ರೇರೇಪಿಸಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ ಎಳೆಯ ಮಕ್ಕಳ ಕಲರವ ನಮ್ಮ ಕ್ಯಾಂಪಸ್ ಗೆ ಹೊಸತನವನ್ನು ತಂದಿದೆ. ಮಕ್ಕಳು ದೇವರ ಪ್ರತಿರೂಪ. ಹಾಗಾಗಿ ಇಡೀ ನಮ್ಮ ಕ್ಯಾಂಪಸ್ ದೈವಿಕ ಕಳೆಯಿಂದ ಕಂಗೊಳಿಸುತ್ತಿದೆ ಎಂದರು.

ಅಬಾಕಸ್ ತರಬೇತುದಾರ ಗುರುರಾಜ್ ಮಾತನಾಡಿದರು.ಎಕ್ಸೆಲ್ ಟೆಕ್ನೋ ಸ್ಕೂಲ್ ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕಿಯರಾದ ಪವಿತ್ರ ಹೆತ್ತವರಿಗೆ ಸಲಹೆ – ಸೂಚನೆಗಳನ್ನು ನೀಡಿದರು. ಗೀತಾ ಸಹಕರಿಸಿದರು. ಸ್ವಾತಿ ನಿರೂಪಿಸಿದರು. ಚೇತನಾ ವಂದಿಸಿದರು.

Related posts

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!