25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಆದೇಶದಂತೆ ನಿನ್ನೆ ಮತ್ತು ಇಂದು ತಾಲೂಕಿನ 42 ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ಗುಡ್ಡ ಜರಿತ ಸ್ಥಳಗಳಲ್ಲಿ ಮತ್ತು ಹೊಳೆ/ತೊರೆ ಬದಿಯಲ್ಲಿರುವ 432 ಮನೆಗಳವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರಂತೆ ನೋಟೀಸನ್ನು ಖುದ್ದಾಗಿ ಜಾರಿಗೊಳಿಸಿದರು.

ಅಧಿಕ ಮಳೆಯಾದ ಸಂದರ್ಭದಲ್ಲಿ ತೆರೆಯಲಾಗುವ ಕಾಳಜಿ ಕೇಂದ್ರಗಳಿಗೆ ಅಥವಾ ಸಂಬಂಧಿಕರ ಮನೆಗಳಿಗೆ ತೆರಳುವಂತೆ ನೋಟಿಸಿನಲ್ಲಿ ಸೂಚಿಸಲಾಗಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 6 ಮನೆಗಳಿಗೆ ನೋಟೀಸು ನೀಡಲಾಗಿದ್ದು ತಾಲೂಕಿನಲ್ಲಿ ಒಟ್ಟು 438 ಮನೆಗಳಿಗೆ ನೋಟೀಸು ನೀಡಲಾಗಿದೆ.


ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಕ ಮಾಡಲಾಗಿದ್ದು ಮಳೆಗಾಲದ ಅವಧಿಯಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆಯೂ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ಗಾಳಿಯಿಂದ ಉಂಟಾಗಬಹುದಾದ ವಿಪತ್ತುಗಳ ಬಗ್ಗೆ ತೀವ್ರ ನಿಗಾ ವಹಿಸಿ ಆಕಸ್ಮಿಕ ಅವಗಢಗಳು ಉಂಟಾದಾಗ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆಯೊಂದಿಗೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!