22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಆದೇಶದಂತೆ ನಿನ್ನೆ ಮತ್ತು ಇಂದು ತಾಲೂಕಿನ 42 ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ಗುಡ್ಡ ಜರಿತ ಸ್ಥಳಗಳಲ್ಲಿ ಮತ್ತು ಹೊಳೆ/ತೊರೆ ಬದಿಯಲ್ಲಿರುವ 432 ಮನೆಗಳವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರಂತೆ ನೋಟೀಸನ್ನು ಖುದ್ದಾಗಿ ಜಾರಿಗೊಳಿಸಿದರು.

ಅಧಿಕ ಮಳೆಯಾದ ಸಂದರ್ಭದಲ್ಲಿ ತೆರೆಯಲಾಗುವ ಕಾಳಜಿ ಕೇಂದ್ರಗಳಿಗೆ ಅಥವಾ ಸಂಬಂಧಿಕರ ಮನೆಗಳಿಗೆ ತೆರಳುವಂತೆ ನೋಟಿಸಿನಲ್ಲಿ ಸೂಚಿಸಲಾಗಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 6 ಮನೆಗಳಿಗೆ ನೋಟೀಸು ನೀಡಲಾಗಿದ್ದು ತಾಲೂಕಿನಲ್ಲಿ ಒಟ್ಟು 438 ಮನೆಗಳಿಗೆ ನೋಟೀಸು ನೀಡಲಾಗಿದೆ.


ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಕ ಮಾಡಲಾಗಿದ್ದು ಮಳೆಗಾಲದ ಅವಧಿಯಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆಯೂ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ಗಾಳಿಯಿಂದ ಉಂಟಾಗಬಹುದಾದ ವಿಪತ್ತುಗಳ ಬಗ್ಗೆ ತೀವ್ರ ನಿಗಾ ವಹಿಸಿ ಆಕಸ್ಮಿಕ ಅವಗಢಗಳು ಉಂಟಾದಾಗ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆಯೊಂದಿಗೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

Related posts

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya
error: Content is protected !!