25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2025ರ ಸಾಲಿನಲ್ಲಿ ತರಬೇತಿ ಪಡೆದು ತೇರ್ಗಡೆಯಾಗುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಆಯ್ಕೆ ಸಂದರ್ಶನಗಳನ್ನು ನಡೆಸಲಾಯಿತು.

ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿಗಳಾದ ಟೊಯೋಟೊ ಕಿರ್ಲೋಸ್ಕರ್ ಮೋಟರ್ಸ್, ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್, ಎಲ್ ಅಂಡ್ ಟಿ, ಇಶಾರ್ ಮೋಟಾರ್ಸ್, ಕಿರ್ಲೋಸ್ಕರ್ ಟೋಯೋಡಾ ಟೆಕ್ಸ್ಟೈಲ್ಸ್ ಮೆಷಿನರಿಸ್, ಬಾಷ್, ಸಸ್ಮೋಸ್, ಅದ್ವೆöತ್ ಹುಂಡೈ, ಟ್ರೆöಡೆಂಟ್ ಗ್ರೂಫ್ಸ್, ಟಾಟಾ ಅರವಿಂದ್ ಮೋಟಾರ್ಸ್, ಭಾರತ್ ಅಟೋ ಕಾರ್ಸ್, ಭವಾನಿ ಇಂಡಸ್ಟ್ರಿಸ್ ಮುಂತಾದ ಖ್ಯಾತನಾಮ ಕೈಗಾರಿಕಾ ಸಂಸ್ಥೆಗಳಿಂದ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಆಸುಪಾಸಿನ ಹಲವಾರು ಐಟಿಐ ಸಂಸ್ಥೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿರೂ ಈ ವ್ಯವಸ್ಥೆಯ ಸದುಪಯೋಗವನ್ನು ಪಡೆದುಕೊಂಡಿದ್ದು ಐಟಿಐ ತರಬೇತಿ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ನೇಮಕಾತಿಯ ಅವಕಾಶವನ್ನು ಪಡೆದಿದ್ದು ತಮ್ಮ ಮುಂದಿನ ಭವಿಷ್ಯದ ಬಗ್ಗೆ ಚಿಂತಿಸುವ ಅಗತ್ಯವೇ ಇಲ್ಲದಂತಾಗಿದ್ದು ಭದ್ರ ಭವಿಷ್ಯವನ್ನು ರೂಪಿಸಿಕೊಳ್ಳಲು ಅವಕಾಶ ಪ್ರಾಪ್ತಿಯಾಗಿದೆ.

ವೇಣೂರು ಐಟಿಐಯ ಎಲ್ಲಾ ತರಬೇತಿದಾರರಿಗೆ ಮಾತ್ರವಲ್ಲದೆ ಸುತ್ತಮುತ್ತಲಿನ ಐಟಿಐಗಳ 600ಕ್ಕೂ ಹೆಚ್ಚಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಇದರ ಪ್ರಯೋಜನ ಪಡೆಯುವಂತಾಗಿದೆ ಎಂದು ವೇಣೂರು ಐಟಿಐನ ಪ್ರಾಚಾರ್ಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related posts

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!