23.4 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2025ರ ಸಾಲಿನಲ್ಲಿ ತರಬೇತಿ ಪಡೆದು ತೇರ್ಗಡೆಯಾಗುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಆಯ್ಕೆ ಸಂದರ್ಶನಗಳನ್ನು ನಡೆಸಲಾಯಿತು.

ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿಗಳಾದ ಟೊಯೋಟೊ ಕಿರ್ಲೋಸ್ಕರ್ ಮೋಟರ್ಸ್, ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್, ಎಲ್ ಅಂಡ್ ಟಿ, ಇಶಾರ್ ಮೋಟಾರ್ಸ್, ಕಿರ್ಲೋಸ್ಕರ್ ಟೋಯೋಡಾ ಟೆಕ್ಸ್ಟೈಲ್ಸ್ ಮೆಷಿನರಿಸ್, ಬಾಷ್, ಸಸ್ಮೋಸ್, ಅದ್ವೆöತ್ ಹುಂಡೈ, ಟ್ರೆöಡೆಂಟ್ ಗ್ರೂಫ್ಸ್, ಟಾಟಾ ಅರವಿಂದ್ ಮೋಟಾರ್ಸ್, ಭಾರತ್ ಅಟೋ ಕಾರ್ಸ್, ಭವಾನಿ ಇಂಡಸ್ಟ್ರಿಸ್ ಮುಂತಾದ ಖ್ಯಾತನಾಮ ಕೈಗಾರಿಕಾ ಸಂಸ್ಥೆಗಳಿಂದ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಆಸುಪಾಸಿನ ಹಲವಾರು ಐಟಿಐ ಸಂಸ್ಥೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿರೂ ಈ ವ್ಯವಸ್ಥೆಯ ಸದುಪಯೋಗವನ್ನು ಪಡೆದುಕೊಂಡಿದ್ದು ಐಟಿಐ ತರಬೇತಿ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ನೇಮಕಾತಿಯ ಅವಕಾಶವನ್ನು ಪಡೆದಿದ್ದು ತಮ್ಮ ಮುಂದಿನ ಭವಿಷ್ಯದ ಬಗ್ಗೆ ಚಿಂತಿಸುವ ಅಗತ್ಯವೇ ಇಲ್ಲದಂತಾಗಿದ್ದು ಭದ್ರ ಭವಿಷ್ಯವನ್ನು ರೂಪಿಸಿಕೊಳ್ಳಲು ಅವಕಾಶ ಪ್ರಾಪ್ತಿಯಾಗಿದೆ.

ವೇಣೂರು ಐಟಿಐಯ ಎಲ್ಲಾ ತರಬೇತಿದಾರರಿಗೆ ಮಾತ್ರವಲ್ಲದೆ ಸುತ್ತಮುತ್ತಲಿನ ಐಟಿಐಗಳ 600ಕ್ಕೂ ಹೆಚ್ಚಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಇದರ ಪ್ರಯೋಜನ ಪಡೆಯುವಂತಾಗಿದೆ ಎಂದು ವೇಣೂರು ಐಟಿಐನ ಪ್ರಾಚಾರ್ಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related posts

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!