September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

ಧರ್ಮಸ್ಥಳ: ಕೃಷಿ ಹಾಗೂ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ವಿಶೇಷ ಸಾಧನೆಗೈದ ಧರ್ಮಸ್ಥಳ ಅಜೆಕುರಿ ನಿವಾಸಿ ಪಿ.ನಾರಾಯಣ ರಾವ್ (85 ವರ್ಷ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜೂ.12 ರಂದು ನಿಧನರಾದರು.

ಧರ್ಮಸ್ಥಳದಲ್ಲಿ ಕಳೆದ 40 ವರ್ಷಗಳಿಂದ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಪಿ‌.ನಾರಾಯಣ ರಾವ್ ಅವರು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಕೃಷಿ ಮತ್ತು ಹೈನುಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಇದರಲ್ಲಿ ವಿಶೇಷ ಸಾಧನೆ ಮಾಡಿದ್ದರು.

ಮೃತರು ಪತ್ನಿ ಕಮಲ, ಆರು ಮಕ್ಕಳಾದ ಕೃಷ್ಣ, ಸದಾಶಿವ, ಪ್ರಕಾಶ, ದಿನೇಶ್, ವಿಜಯ, ಹರಿಣಾಕ್ಷಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಮೃತರ ಮನೆಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ವಿಮಲ, ಸದಸ್ಯ ಹರ್ಷಿತ್ ಹಾಗೂ ಊರವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya
error: Content is protected !!