25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಯೋಗಾಸನ ತರಬೇತಿ ಕಾರ್ಯಕ್ರಮದ ಉದ್ಘಾಟನ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ನ್ಯೂಟ್ರಿಷನ್ ಮತ್ತು ಡಯಟಿಕ್ಸ್ ವಿಭಾಗದ ಡೀನ್ ಡಾ. ಗೀತಾ.ಬಿ ಶೆಟ್ಟಿ ಹಾಗೂ ಕ್ಲಿನಿಕಲ್ ಯೋಗ (ಎಮ್.ಡಿ) ಪ್ರಥಮ ವರ್ಷದ ವಿದ್ಯಾರ್ಥಿನಿ ಡಾ. ಅಶ್ವಿನಿ.ಎ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ, ಯೋಗದ ಮಹತ್ವದ ಕುರಿತು ಮಾಹಿತಿ ಹಂಚಿಕೊಂಡರು.

ತರಬೇತುದಾರರಾಗಿ ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಾದ ದಿವ್ಯ ಬಿ.ಯು ಹಾಗೂ ನಿರ್ವಾಣ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಸತ್ಸಂಗ”

Suddi Udaya
error: Content is protected !!