23.7 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

ಉಜಿರೆ: ಸ್ಟಾರ್ಟಅಪ್ ಇನ್ಕುಬೇಶನ್ ಹಾಗೂ ಉದ್ಯಮಶೀಲತೆ ಉತ್ತೇಜಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ನಕ್ಸ್ಟ್‌ಅಲೈನ್ ಮತ್ತು ಟೆಲೊಕ್ವೆನ್ಸ್ ಎಂಬ ಸ್ಟಾರ್ಟಪ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.


“ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ನವೀನ ತಂತ್ರಜ್ಞಾನಗಳಲ್ಲಿ ಅನುಭವ ಪಡೆಯಲು, ಸ್ವ-ಉದ್ಯಮ ಕೈಗೊಳ್ಳಲು ಸಹಾಯವಾಗುವಂತೆ ತಂತ್ರಜ್ಞರಿಂದ ಮಾರ್ಗದರ್ಶನ ಹಾಗೂ ನೈಜ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಿರುವ ಈ ಅವಕಾಶವು ವಿದ್ಯಾರ್ಥಿಗಳನ್ನು ಉದ್ಯೋಗದಾತರನ್ನಾಗಿಯೂ ರೂಪಿಸಲು ಸಹಕಾರಿಯಾಗಿರುತ್ತದೆ” ಎಂದು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಟೆಲೊಕ್ವೆನ್ಸ್ ನ ಮುಖ್ಯ ತಾಂತ್ರಿಕ ಅಧಿಕಾರಿ ಶ್ರೀಮತಿ ಅಕ್ಷತಾ ಜೈನ್, ಪ್ರವೀಣ್ ಗೋರೆ (ಟೆಲೊಕ್ವೆನ್ಸ್), ನಕ್ಸ್ಟ್‌ಅಲೈನ್ ನಿರ್ದೇಶಕ ವಿಜಯ್, ಡಿಲೈತ್‌ನಿರ್ದೇಶಕ ಅರುಣ್ ರಾಜಪುರೋಹಿತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಮತ್ತು ಸ್ಟಾರ್ಟಪ್‌ಸ್ಕ್ವೇರ್ ಸಂಯೋಜಕರಾದ ಡಾ. ಬಸವ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!