25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

ಉಜಿರೆ: ಸ್ಟಾರ್ಟಅಪ್ ಇನ್ಕುಬೇಶನ್ ಹಾಗೂ ಉದ್ಯಮಶೀಲತೆ ಉತ್ತೇಜಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ನಕ್ಸ್ಟ್‌ಅಲೈನ್ ಮತ್ತು ಟೆಲೊಕ್ವೆನ್ಸ್ ಎಂಬ ಸ್ಟಾರ್ಟಪ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.


“ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ನವೀನ ತಂತ್ರಜ್ಞಾನಗಳಲ್ಲಿ ಅನುಭವ ಪಡೆಯಲು, ಸ್ವ-ಉದ್ಯಮ ಕೈಗೊಳ್ಳಲು ಸಹಾಯವಾಗುವಂತೆ ತಂತ್ರಜ್ಞರಿಂದ ಮಾರ್ಗದರ್ಶನ ಹಾಗೂ ನೈಜ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಿರುವ ಈ ಅವಕಾಶವು ವಿದ್ಯಾರ್ಥಿಗಳನ್ನು ಉದ್ಯೋಗದಾತರನ್ನಾಗಿಯೂ ರೂಪಿಸಲು ಸಹಕಾರಿಯಾಗಿರುತ್ತದೆ” ಎಂದು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಟೆಲೊಕ್ವೆನ್ಸ್ ನ ಮುಖ್ಯ ತಾಂತ್ರಿಕ ಅಧಿಕಾರಿ ಶ್ರೀಮತಿ ಅಕ್ಷತಾ ಜೈನ್, ಪ್ರವೀಣ್ ಗೋರೆ (ಟೆಲೊಕ್ವೆನ್ಸ್), ನಕ್ಸ್ಟ್‌ಅಲೈನ್ ನಿರ್ದೇಶಕ ವಿಜಯ್, ಡಿಲೈತ್‌ನಿರ್ದೇಶಕ ಅರುಣ್ ರಾಜಪುರೋಹಿತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಮತ್ತು ಸ್ಟಾರ್ಟಪ್‌ಸ್ಕ್ವೇರ್ ಸಂಯೋಜಕರಾದ ಡಾ. ಬಸವ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!