25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

ಕಕ್ಕಿಂಜೆ: ಇಲ್ಲಿಯ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರುವಾಸಿಯಾದ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಗೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನಾ ಸಮಾರಂಭವು ಜೂ.17 ರಂದು ನಡೆಯಲಿದೆ ಎಂದು ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಮುರಳಿಕೃಷ್ಣ ಇರ್ವತ್ರಾಯ ತಿಳಿಸಿರುತ್ತಾರೆ.

ಮಂಗಳೂರು ಕೆಎಂಸಿ ಜನರಲ್ ಮೆಡಿಸಿನ್ ವಿಭಾಗದ ಪ್ರೊಫೆಸರ್, ವೈದ್ಯಕೀಯ ಅಧೀಕ್ಷಕರು ಡಾ| ಚಕ್ರಪಾಣಿ ಎಂ. ಉದ್ಘಾಟನೆಯನ್ನು ನೆರವೇರಿಸಲಿರುವರು. ಮುಖ್ಯ ಅತಿಥಿಗಳಾದ ಬೆಳ್ತಂಗಡಿ ತಾಲೂಕು ಐಎಂಎ ಅಧ್ಯಕ್ಷರು, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಡಾ| ಸ್ವರ್ಣಲತಾ ರವರು ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ನ್ನು ಉದ್ಘಾಟಿಸಲಿರುವರು. ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ನ ಮುಖ್ಯ ಇನ್ಫರ್ಟಿಲಿಟಿ ಕನ್ಸಲ್ವೆಂಟ್ ಡಾ| ಗೌರವ್ ಗುಜರಾತಿ ರವರು ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟಿಸಲಿರುವರು.

ಬೆಳ್ತಂಗಡಿ ತುಳು ಶಿವಳ್ಳಿ ಸಭಾದ ಅಧ್ಯಕ್ಷ ರಾಜಪ್ರಸಾದ ಪೊಳ್ನಾಯ, ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಡಾ. ವಂದನಾ ಎಂ. ಇರ್ವತ್ರಾಯ ಭಾಗವಹಿಸಲಿರುವರು. ಆಸ್ಪತ್ರೆಯು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ,ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್, ಹೊಯ್ಸಳ ಹೆಲ್ತ್ಕೇರ್ ಮೂಡಿಗೆರೆಯಲ್ಲಿ ಜನರಿಗೆ ಆರೋಗ್ಯ ಸೇವೆ ನೀಡುತ್ತಿದೆ.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya
error: Content is protected !!