25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭವು ಶಾಲೆಯ ಕ್ರೀಡಾ ಸಂಘ, ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಮತ್ತು ಕಬ್ ಮತ್ತು ಬುಲ್ ಬುಲ್ ಸಂಘಗಳ ಜಂಟಿ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ಸಾನಿಧ್ಯ ಹಾಗೂ ಕುಮಾರಿ ಅನನ್ಯ ಇವರು ಯೋಗ ತರಬೇತುದಾರರಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಕುಮಾರಿ ಅನನ್ಯ ಯೋಗದ ಮಹತ್ವ ಯೋಗದ ಅವಶ್ಯಕತೆ ವಿದ್ಯಾರ್ಥಿಗಳಿಗೆ ಯೋಗದಿಂದ ಆಗುವ ಉಪಯೋಗ ಇತ್ಯಾದಿಗಳನ್ನು ಕೂಲಂಕುಶವಾಗಿ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯನ ಶ್ರೀಮತಿ ಪರಿಮಳ ಎಂ ವಿ ಯೋಗದಿಂದ ಹೇಗೆ ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯನ್ನು ಕಂಡುಕೊಳ್ಳಬಹುದು. ಪ್ರಸ್ತುತ ದಿನದಲ್ಲಿ ಯೋಗದ ಅವಶ್ಯಕತೆ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಂಶಗಳ ಕುರಿತು ವಿಸ್ತಾರವಾಗಿ ವಿವರಿಸಿದರು. ಬಳಿಕ ಆಗಮಿಸಿದ್ದ ತರಬೇತುದಾರರು ವಿದ್ಯಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ಇನ್ನಿತರ ಯೋಗಾಸನಾದ ಆಸನಗಳನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ನಿರ್ವಹಿಸಿದರು.

Related posts

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!