26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭವು ಶಾಲೆಯ ಕ್ರೀಡಾ ಸಂಘ, ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಮತ್ತು ಕಬ್ ಮತ್ತು ಬುಲ್ ಬುಲ್ ಸಂಘಗಳ ಜಂಟಿ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ಸಾನಿಧ್ಯ ಹಾಗೂ ಕುಮಾರಿ ಅನನ್ಯ ಇವರು ಯೋಗ ತರಬೇತುದಾರರಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಕುಮಾರಿ ಅನನ್ಯ ಯೋಗದ ಮಹತ್ವ ಯೋಗದ ಅವಶ್ಯಕತೆ ವಿದ್ಯಾರ್ಥಿಗಳಿಗೆ ಯೋಗದಿಂದ ಆಗುವ ಉಪಯೋಗ ಇತ್ಯಾದಿಗಳನ್ನು ಕೂಲಂಕುಶವಾಗಿ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯನ ಶ್ರೀಮತಿ ಪರಿಮಳ ಎಂ ವಿ ಯೋಗದಿಂದ ಹೇಗೆ ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯನ್ನು ಕಂಡುಕೊಳ್ಳಬಹುದು. ಪ್ರಸ್ತುತ ದಿನದಲ್ಲಿ ಯೋಗದ ಅವಶ್ಯಕತೆ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಂಶಗಳ ಕುರಿತು ವಿಸ್ತಾರವಾಗಿ ವಿವರಿಸಿದರು. ಬಳಿಕ ಆಗಮಿಸಿದ್ದ ತರಬೇತುದಾರರು ವಿದ್ಯಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ಇನ್ನಿತರ ಯೋಗಾಸನಾದ ಆಸನಗಳನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ನಿರ್ವಹಿಸಿದರು.

Related posts

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya
error: Content is protected !!