July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭವು ಶಾಲೆಯ ಕ್ರೀಡಾ ಸಂಘ, ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಮತ್ತು ಕಬ್ ಮತ್ತು ಬುಲ್ ಬುಲ್ ಸಂಘಗಳ ಜಂಟಿ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ಸಾನಿಧ್ಯ ಹಾಗೂ ಕುಮಾರಿ ಅನನ್ಯ ಇವರು ಯೋಗ ತರಬೇತುದಾರರಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಕುಮಾರಿ ಅನನ್ಯ ಯೋಗದ ಮಹತ್ವ ಯೋಗದ ಅವಶ್ಯಕತೆ ವಿದ್ಯಾರ್ಥಿಗಳಿಗೆ ಯೋಗದಿಂದ ಆಗುವ ಉಪಯೋಗ ಇತ್ಯಾದಿಗಳನ್ನು ಕೂಲಂಕುಶವಾಗಿ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯನ ಶ್ರೀಮತಿ ಪರಿಮಳ ಎಂ ವಿ ಯೋಗದಿಂದ ಹೇಗೆ ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯನ್ನು ಕಂಡುಕೊಳ್ಳಬಹುದು. ಪ್ರಸ್ತುತ ದಿನದಲ್ಲಿ ಯೋಗದ ಅವಶ್ಯಕತೆ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಂಶಗಳ ಕುರಿತು ವಿಸ್ತಾರವಾಗಿ ವಿವರಿಸಿದರು. ಬಳಿಕ ಆಗಮಿಸಿದ್ದ ತರಬೇತುದಾರರು ವಿದ್ಯಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ಇನ್ನಿತರ ಯೋಗಾಸನಾದ ಆಸನಗಳನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ನಿರ್ವಹಿಸಿದರು.

Related posts

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!