March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

ಬೆಳ್ತಂಗಡಿ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶಾಲಾ ಕ್ರೀಡಾ ಸಂಘದ ವತಿಯಿಂದ 10 ದಿನದ ಉಚಿತ ಯೋಗ ತರಬೇತಿ ಶಿಬಿರವನ್ನು ಅಂತರಾಷ್ಟ್ರೀಯ ಯೋಗ ತರಬೇತುದಾರರು, ಯೋಗ ಗುರುಗಳಾದ ಕೆ ಅಶೋಕ್ ಕುಮಾರ್ ಉದ್ಘಾಟಿಸಿದರು.


ಯೋಗ ಶಿಬಿರದ ಉದ್ಘಾಟಕರಾಗಿ ಆಗಮಿಸಿ ನಮ್ಮ ದಿನನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಆರೋಗ್ಯಯುತ ಜೀವನಕ್ಕೆ ಯೋಗ ಮತ್ತು ಪ್ರಾಣಾಯಾಮ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ ಆರ್ ರವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಯೋಗ ತರಬೇತುಗಾರರಾಗಿ ಎಸ್.ಡಿ.ಎಮ್ ಬಿ.ಎನ್.ವೈ.ಎಸ್ ಕಾಲೇಜಿನ ವಿದ್ಯಾರ್ಥಿನಿಯರಾದ ಸುಕೇತ, ಪ್ರಾಪ್ತಿ ಮತ್ತು ಕೀರ್ತನಾ ಭಾಗವಹಿಸಿದ್ದರು. ಶಾಲಾ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ಉಪಸ್ಥಿತರಿದ್ದರು.


ಶಿಕ್ಷಕಿ ಶ್ರೀಮತಿ ಗೀತಾ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಚೇತನಾ ವಂದಿಸಿ, ಶ್ರೀಮತಿ ನೀತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!