July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಸ್ನಾತ್ತಕೋತ್ತರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಮ್ಯೂಚುವಲ್ ಫಂಡ್ ಹಾಗೂ ಇತರೆ ಶೇರು ಮಾರುಕಟ್ಟೆಯ ಹೂಡಿಕೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಹೂಡಿಕೆ ತಜ್ಞ ಅರ್ವಿನ್ ಡಿಸೋಜ ಇವರು ವಿದ್ಯಾರ್ಥಿಗಳಿಗೆ ಹೂಡಿಕೆ ಮಾಡುವಾಗ ಯೋಚನೆ ಮಾಡಿ ವಿಮರ್ಶೆ ಮಾಡಿ ತುಲನಾತ್ಮಕ ಅಧ್ಯಯನದೊಂದಿಗೆ ಹೂಡಿಕೆ ಮಾಡಬೇಕಾಗುತ್ತದೆ. ಷೇರು ಮಾರುಕಟ್ಟೆಯಲ್ಲಿ ಪ್ರತಿದಿನ ಕ್ಷಣ ಕ್ಷಣಕ್ಕೂ ಏರಿಳಿತಗಳಾಗುತ್ತಿರುತ್ತವೆ, ಅದನ್ನು ಗಮನಿಸಿ ನಾವು ಹೂಡಿಕೆ ಮಾಡಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ., ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಕೆ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ| ರವಿ ಎಮ್ ಏನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಎಂಕಾಂ ನ ಕುಮಾರಿ ಅನನ್ಯ ಜೈನ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Related posts

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹ ಸಂಸ್ಥೆ ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ವೈದ್ಯರ ದಿನಾಚರಣೆ: ಹಿರಿಯ ವೈದ್ಯ ಡಾ. ಅನಂತ ಕೃಷ್ಣ ಉಪಾಧ್ಯಾಯ ಪಾದೂರು ಅವರಿಗೆ ಸನ್ಮಾನ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya
error: Content is protected !!