23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

ಉಜಿರೆ: ಸ್ಟಾರ್ಟಅಪ್ ಇನ್ಕುಬೇಶನ್ ಹಾಗೂ ಉದ್ಯಮಶೀಲತೆ ಉತ್ತೇಜಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ನಕ್ಸ್ಟ್‌ಅಲೈನ್ ಮತ್ತು ಟೆಲೊಕ್ವೆನ್ಸ್ ಎಂಬ ಸ್ಟಾರ್ಟಪ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.


“ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ನವೀನ ತಂತ್ರಜ್ಞಾನಗಳಲ್ಲಿ ಅನುಭವ ಪಡೆಯಲು, ಸ್ವ-ಉದ್ಯಮ ಕೈಗೊಳ್ಳಲು ಸಹಾಯವಾಗುವಂತೆ ತಂತ್ರಜ್ಞರಿಂದ ಮಾರ್ಗದರ್ಶನ ಹಾಗೂ ನೈಜ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಿರುವ ಈ ಅವಕಾಶವು ವಿದ್ಯಾರ್ಥಿಗಳನ್ನು ಉದ್ಯೋಗದಾತರನ್ನಾಗಿಯೂ ರೂಪಿಸಲು ಸಹಕಾರಿಯಾಗಿರುತ್ತದೆ” ಎಂದು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಟೆಲೊಕ್ವೆನ್ಸ್ ನ ಮುಖ್ಯ ತಾಂತ್ರಿಕ ಅಧಿಕಾರಿ ಶ್ರೀಮತಿ ಅಕ್ಷತಾ ಜೈನ್, ಪ್ರವೀಣ್ ಗೋರೆ (ಟೆಲೊಕ್ವೆನ್ಸ್), ನಕ್ಸ್ಟ್‌ಅಲೈನ್ ನಿರ್ದೇಶಕ ವಿಜಯ್, ಡಿಲೈತ್‌ನಿರ್ದೇಶಕ ಅರುಣ್ ರಾಜಪುರೋಹಿತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಮತ್ತು ಸ್ಟಾರ್ಟಪ್‌ಸ್ಕ್ವೇರ್ ಸಂಯೋಜಕರಾದ ಡಾ. ಬಸವ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya
error: Content is protected !!