July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

ಉಜಿರೆ: ಸ್ಟಾರ್ಟಅಪ್ ಇನ್ಕುಬೇಶನ್ ಹಾಗೂ ಉದ್ಯಮಶೀಲತೆ ಉತ್ತೇಜಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ನಕ್ಸ್ಟ್‌ಅಲೈನ್ ಮತ್ತು ಟೆಲೊಕ್ವೆನ್ಸ್ ಎಂಬ ಸ್ಟಾರ್ಟಪ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.


“ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ನವೀನ ತಂತ್ರಜ್ಞಾನಗಳಲ್ಲಿ ಅನುಭವ ಪಡೆಯಲು, ಸ್ವ-ಉದ್ಯಮ ಕೈಗೊಳ್ಳಲು ಸಹಾಯವಾಗುವಂತೆ ತಂತ್ರಜ್ಞರಿಂದ ಮಾರ್ಗದರ್ಶನ ಹಾಗೂ ನೈಜ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಿರುವ ಈ ಅವಕಾಶವು ವಿದ್ಯಾರ್ಥಿಗಳನ್ನು ಉದ್ಯೋಗದಾತರನ್ನಾಗಿಯೂ ರೂಪಿಸಲು ಸಹಕಾರಿಯಾಗಿರುತ್ತದೆ” ಎಂದು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಟೆಲೊಕ್ವೆನ್ಸ್ ನ ಮುಖ್ಯ ತಾಂತ್ರಿಕ ಅಧಿಕಾರಿ ಶ್ರೀಮತಿ ಅಕ್ಷತಾ ಜೈನ್, ಪ್ರವೀಣ್ ಗೋರೆ (ಟೆಲೊಕ್ವೆನ್ಸ್), ನಕ್ಸ್ಟ್‌ಅಲೈನ್ ನಿರ್ದೇಶಕ ವಿಜಯ್, ಡಿಲೈತ್‌ನಿರ್ದೇಶಕ ಅರುಣ್ ರಾಜಪುರೋಹಿತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಮತ್ತು ಸ್ಟಾರ್ಟಪ್‌ಸ್ಕ್ವೇರ್ ಸಂಯೋಜಕರಾದ ಡಾ. ಬಸವ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya
error: Content is protected !!