23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

ಉಜಿರೆ: ಸ್ಟಾರ್ಟಅಪ್ ಇನ್ಕುಬೇಶನ್ ಹಾಗೂ ಉದ್ಯಮಶೀಲತೆ ಉತ್ತೇಜಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ನಕ್ಸ್ಟ್‌ಅಲೈನ್ ಮತ್ತು ಟೆಲೊಕ್ವೆನ್ಸ್ ಎಂಬ ಸ್ಟಾರ್ಟಪ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.


“ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ನವೀನ ತಂತ್ರಜ್ಞಾನಗಳಲ್ಲಿ ಅನುಭವ ಪಡೆಯಲು, ಸ್ವ-ಉದ್ಯಮ ಕೈಗೊಳ್ಳಲು ಸಹಾಯವಾಗುವಂತೆ ತಂತ್ರಜ್ಞರಿಂದ ಮಾರ್ಗದರ್ಶನ ಹಾಗೂ ನೈಜ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಿರುವ ಈ ಅವಕಾಶವು ವಿದ್ಯಾರ್ಥಿಗಳನ್ನು ಉದ್ಯೋಗದಾತರನ್ನಾಗಿಯೂ ರೂಪಿಸಲು ಸಹಕಾರಿಯಾಗಿರುತ್ತದೆ” ಎಂದು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಟೆಲೊಕ್ವೆನ್ಸ್ ನ ಮುಖ್ಯ ತಾಂತ್ರಿಕ ಅಧಿಕಾರಿ ಶ್ರೀಮತಿ ಅಕ್ಷತಾ ಜೈನ್, ಪ್ರವೀಣ್ ಗೋರೆ (ಟೆಲೊಕ್ವೆನ್ಸ್), ನಕ್ಸ್ಟ್‌ಅಲೈನ್ ನಿರ್ದೇಶಕ ವಿಜಯ್, ಡಿಲೈತ್‌ನಿರ್ದೇಶಕ ಅರುಣ್ ರಾಜಪುರೋಹಿತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಮತ್ತು ಸ್ಟಾರ್ಟಪ್‌ಸ್ಕ್ವೇರ್ ಸಂಯೋಜಕರಾದ ಡಾ. ಬಸವ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!