25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

ಉಜಿರೆ: ಸ್ಟಾರ್ಟಅಪ್ ಇನ್ಕುಬೇಶನ್ ಹಾಗೂ ಉದ್ಯಮಶೀಲತೆ ಉತ್ತೇಜಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ನಕ್ಸ್ಟ್‌ಅಲೈನ್ ಮತ್ತು ಟೆಲೊಕ್ವೆನ್ಸ್ ಎಂಬ ಸ್ಟಾರ್ಟಪ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.


“ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ನವೀನ ತಂತ್ರಜ್ಞಾನಗಳಲ್ಲಿ ಅನುಭವ ಪಡೆಯಲು, ಸ್ವ-ಉದ್ಯಮ ಕೈಗೊಳ್ಳಲು ಸಹಾಯವಾಗುವಂತೆ ತಂತ್ರಜ್ಞರಿಂದ ಮಾರ್ಗದರ್ಶನ ಹಾಗೂ ನೈಜ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಿರುವ ಈ ಅವಕಾಶವು ವಿದ್ಯಾರ್ಥಿಗಳನ್ನು ಉದ್ಯೋಗದಾತರನ್ನಾಗಿಯೂ ರೂಪಿಸಲು ಸಹಕಾರಿಯಾಗಿರುತ್ತದೆ” ಎಂದು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಟೆಲೊಕ್ವೆನ್ಸ್ ನ ಮುಖ್ಯ ತಾಂತ್ರಿಕ ಅಧಿಕಾರಿ ಶ್ರೀಮತಿ ಅಕ್ಷತಾ ಜೈನ್, ಪ್ರವೀಣ್ ಗೋರೆ (ಟೆಲೊಕ್ವೆನ್ಸ್), ನಕ್ಸ್ಟ್‌ಅಲೈನ್ ನಿರ್ದೇಶಕ ವಿಜಯ್, ಡಿಲೈತ್‌ನಿರ್ದೇಶಕ ಅರುಣ್ ರಾಜಪುರೋಹಿತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಮತ್ತು ಸ್ಟಾರ್ಟಪ್‌ಸ್ಕ್ವೇರ್ ಸಂಯೋಜಕರಾದ ಡಾ. ಬಸವ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya
error: Content is protected !!