September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

ಕಕ್ಕಿಂಜೆ: ಇಲ್ಲಿಯ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರುವಾಸಿಯಾದ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಗೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನಾ ಸಮಾರಂಭವು ಜೂ.17 ರಂದು ನಡೆಯಲಿದೆ ಎಂದು ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಮುರಳಿಕೃಷ್ಣ ಇರ್ವತ್ರಾಯ ತಿಳಿಸಿರುತ್ತಾರೆ.

ಮಂಗಳೂರು ಕೆಎಂಸಿ ಜನರಲ್ ಮೆಡಿಸಿನ್ ವಿಭಾಗದ ಪ್ರೊಫೆಸರ್, ವೈದ್ಯಕೀಯ ಅಧೀಕ್ಷಕರು ಡಾ| ಚಕ್ರಪಾಣಿ ಎಂ. ಉದ್ಘಾಟನೆಯನ್ನು ನೆರವೇರಿಸಲಿರುವರು. ಮುಖ್ಯ ಅತಿಥಿಗಳಾದ ಬೆಳ್ತಂಗಡಿ ತಾಲೂಕು ಐಎಂಎ ಅಧ್ಯಕ್ಷರು, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಡಾ| ಸ್ವರ್ಣಲತಾ ರವರು ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ನ್ನು ಉದ್ಘಾಟಿಸಲಿರುವರು. ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ನ ಮುಖ್ಯ ಇನ್ಫರ್ಟಿಲಿಟಿ ಕನ್ಸಲ್ವೆಂಟ್ ಡಾ| ಗೌರವ್ ಗುಜರಾತಿ ರವರು ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟಿಸಲಿರುವರು.

ಬೆಳ್ತಂಗಡಿ ತುಳು ಶಿವಳ್ಳಿ ಸಭಾದ ಅಧ್ಯಕ್ಷ ರಾಜಪ್ರಸಾದ ಪೊಳ್ನಾಯ, ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಡಾ. ವಂದನಾ ಎಂ. ಇರ್ವತ್ರಾಯ ಭಾಗವಹಿಸಲಿರುವರು. ಆಸ್ಪತ್ರೆಯು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ,ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್, ಹೊಯ್ಸಳ ಹೆಲ್ತ್ಕೇರ್ ಮೂಡಿಗೆರೆಯಲ್ಲಿ ಜನರಿಗೆ ಆರೋಗ್ಯ ಸೇವೆ ನೀಡುತ್ತಿದೆ.

Related posts

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya
error: Content is protected !!