27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭವು ಶಾಲೆಯ ಕ್ರೀಡಾ ಸಂಘ, ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಮತ್ತು ಕಬ್ ಮತ್ತು ಬುಲ್ ಬುಲ್ ಸಂಘಗಳ ಜಂಟಿ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ಸಾನಿಧ್ಯ ಹಾಗೂ ಕುಮಾರಿ ಅನನ್ಯ ಇವರು ಯೋಗ ತರಬೇತುದಾರರಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಕುಮಾರಿ ಅನನ್ಯ ಯೋಗದ ಮಹತ್ವ ಯೋಗದ ಅವಶ್ಯಕತೆ ವಿದ್ಯಾರ್ಥಿಗಳಿಗೆ ಯೋಗದಿಂದ ಆಗುವ ಉಪಯೋಗ ಇತ್ಯಾದಿಗಳನ್ನು ಕೂಲಂಕುಶವಾಗಿ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯನ ಶ್ರೀಮತಿ ಪರಿಮಳ ಎಂ ವಿ ಯೋಗದಿಂದ ಹೇಗೆ ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯನ್ನು ಕಂಡುಕೊಳ್ಳಬಹುದು. ಪ್ರಸ್ತುತ ದಿನದಲ್ಲಿ ಯೋಗದ ಅವಶ್ಯಕತೆ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಂಶಗಳ ಕುರಿತು ವಿಸ್ತಾರವಾಗಿ ವಿವರಿಸಿದರು. ಬಳಿಕ ಆಗಮಿಸಿದ್ದ ತರಬೇತುದಾರರು ವಿದ್ಯಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ಇನ್ನಿತರ ಯೋಗಾಸನಾದ ಆಸನಗಳನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ನಿರ್ವಹಿಸಿದರು.

Related posts

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಹಾಗೂ ಇಂಟರ್ನೆಟ್ ಕ್ಲಬ್ ಆಶ್ರಯದಲ್ಲಿ ಶುಗರ್ ಹಾಗೂ ಬಿಪಿ ತಪಾಸಣೆ

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya
error: Content is protected !!