July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭವು ಶಾಲೆಯ ಕ್ರೀಡಾ ಸಂಘ, ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಮತ್ತು ಕಬ್ ಮತ್ತು ಬುಲ್ ಬುಲ್ ಸಂಘಗಳ ಜಂಟಿ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ಸಾನಿಧ್ಯ ಹಾಗೂ ಕುಮಾರಿ ಅನನ್ಯ ಇವರು ಯೋಗ ತರಬೇತುದಾರರಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಕುಮಾರಿ ಅನನ್ಯ ಯೋಗದ ಮಹತ್ವ ಯೋಗದ ಅವಶ್ಯಕತೆ ವಿದ್ಯಾರ್ಥಿಗಳಿಗೆ ಯೋಗದಿಂದ ಆಗುವ ಉಪಯೋಗ ಇತ್ಯಾದಿಗಳನ್ನು ಕೂಲಂಕುಶವಾಗಿ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯನ ಶ್ರೀಮತಿ ಪರಿಮಳ ಎಂ ವಿ ಯೋಗದಿಂದ ಹೇಗೆ ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯನ್ನು ಕಂಡುಕೊಳ್ಳಬಹುದು. ಪ್ರಸ್ತುತ ದಿನದಲ್ಲಿ ಯೋಗದ ಅವಶ್ಯಕತೆ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಂಶಗಳ ಕುರಿತು ವಿಸ್ತಾರವಾಗಿ ವಿವರಿಸಿದರು. ಬಳಿಕ ಆಗಮಿಸಿದ್ದ ತರಬೇತುದಾರರು ವಿದ್ಯಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ಇನ್ನಿತರ ಯೋಗಾಸನಾದ ಆಸನಗಳನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ನಿರ್ವಹಿಸಿದರು.

Related posts

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya
error: Content is protected !!