September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭವು ಶಾಲೆಯ ಕ್ರೀಡಾ ಸಂಘ, ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಮತ್ತು ಕಬ್ ಮತ್ತು ಬುಲ್ ಬುಲ್ ಸಂಘಗಳ ಜಂಟಿ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ಸಾನಿಧ್ಯ ಹಾಗೂ ಕುಮಾರಿ ಅನನ್ಯ ಇವರು ಯೋಗ ತರಬೇತುದಾರರಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಕುಮಾರಿ ಅನನ್ಯ ಯೋಗದ ಮಹತ್ವ ಯೋಗದ ಅವಶ್ಯಕತೆ ವಿದ್ಯಾರ್ಥಿಗಳಿಗೆ ಯೋಗದಿಂದ ಆಗುವ ಉಪಯೋಗ ಇತ್ಯಾದಿಗಳನ್ನು ಕೂಲಂಕುಶವಾಗಿ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯನ ಶ್ರೀಮತಿ ಪರಿಮಳ ಎಂ ವಿ ಯೋಗದಿಂದ ಹೇಗೆ ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯನ್ನು ಕಂಡುಕೊಳ್ಳಬಹುದು. ಪ್ರಸ್ತುತ ದಿನದಲ್ಲಿ ಯೋಗದ ಅವಶ್ಯಕತೆ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಂಶಗಳ ಕುರಿತು ವಿಸ್ತಾರವಾಗಿ ವಿವರಿಸಿದರು. ಬಳಿಕ ಆಗಮಿಸಿದ್ದ ತರಬೇತುದಾರರು ವಿದ್ಯಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ಇನ್ನಿತರ ಯೋಗಾಸನಾದ ಆಸನಗಳನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ನಿರ್ವಹಿಸಿದರು.

Related posts

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya
error: Content is protected !!