ಕಲ್ಮಂಜ: ಶ್ರೀ ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ಇಲ್ಲಿನ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ, ದಾನಿಗಳು , ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಾರ್ಗದರ್ಶಕ ಮೋಹನ್ ಕುಮಾರ್ ಇವರಿಂದ ಸುಮಾರು 25 ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ಕೊಡೆಯನ್ನು ವಿತರಿಸಲಾಯಿತು.
ಈ ವೇಳೆ 32 ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಲ್ಮಂಜ ಪ್ರೌಢಶಾಲೆಯ ಅತ್ಯುತ್ತಮ ಸಾಧಕ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಇವರಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನವನ್ನು ನೀಡಿ ಅಭಿನಂದಿಸಿದರು.
ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಸಂಯೋಜಕರಾದ ಕೆ ಮಂಜುನಾಥ ಶೆಟ್ಟಿ ಸಲಹೆಗಾರರಾದ ವೇಣುಗೋಪಾಲ ಗೌಡ ಮಕ್ಕಳ ಪೋಷಕರು ಉಪಸ್ಥಿತರಿದ್ದರು.