23.4 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

ಬೆಳ್ತಂಗಡಿ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶಾಲಾ ಕ್ರೀಡಾ ಸಂಘದ ವತಿಯಿಂದ 10 ದಿನದ ಉಚಿತ ಯೋಗ ತರಬೇತಿ ಶಿಬಿರವನ್ನು ಅಂತರಾಷ್ಟ್ರೀಯ ಯೋಗ ತರಬೇತುದಾರರು, ಯೋಗ ಗುರುಗಳಾದ ಕೆ ಅಶೋಕ್ ಕುಮಾರ್ ಉದ್ಘಾಟಿಸಿದರು.


ಯೋಗ ಶಿಬಿರದ ಉದ್ಘಾಟಕರಾಗಿ ಆಗಮಿಸಿ ನಮ್ಮ ದಿನನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಆರೋಗ್ಯಯುತ ಜೀವನಕ್ಕೆ ಯೋಗ ಮತ್ತು ಪ್ರಾಣಾಯಾಮ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ ಆರ್ ರವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಯೋಗ ತರಬೇತುಗಾರರಾಗಿ ಎಸ್.ಡಿ.ಎಮ್ ಬಿ.ಎನ್.ವೈ.ಎಸ್ ಕಾಲೇಜಿನ ವಿದ್ಯಾರ್ಥಿನಿಯರಾದ ಸುಕೇತ, ಪ್ರಾಪ್ತಿ ಮತ್ತು ಕೀರ್ತನಾ ಭಾಗವಹಿಸಿದ್ದರು. ಶಾಲಾ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ಉಪಸ್ಥಿತರಿದ್ದರು.


ಶಿಕ್ಷಕಿ ಶ್ರೀಮತಿ ಗೀತಾ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಚೇತನಾ ವಂದಿಸಿ, ಶ್ರೀಮತಿ ನೀತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya
error: Content is protected !!