September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

ಬೆಳ್ತಂಗಡಿ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶಾಲಾ ಕ್ರೀಡಾ ಸಂಘದ ವತಿಯಿಂದ 10 ದಿನದ ಉಚಿತ ಯೋಗ ತರಬೇತಿ ಶಿಬಿರವನ್ನು ಅಂತರಾಷ್ಟ್ರೀಯ ಯೋಗ ತರಬೇತುದಾರರು, ಯೋಗ ಗುರುಗಳಾದ ಕೆ ಅಶೋಕ್ ಕುಮಾರ್ ಉದ್ಘಾಟಿಸಿದರು.


ಯೋಗ ಶಿಬಿರದ ಉದ್ಘಾಟಕರಾಗಿ ಆಗಮಿಸಿ ನಮ್ಮ ದಿನನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಆರೋಗ್ಯಯುತ ಜೀವನಕ್ಕೆ ಯೋಗ ಮತ್ತು ಪ್ರಾಣಾಯಾಮ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ ಆರ್ ರವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಯೋಗ ತರಬೇತುಗಾರರಾಗಿ ಎಸ್.ಡಿ.ಎಮ್ ಬಿ.ಎನ್.ವೈ.ಎಸ್ ಕಾಲೇಜಿನ ವಿದ್ಯಾರ್ಥಿನಿಯರಾದ ಸುಕೇತ, ಪ್ರಾಪ್ತಿ ಮತ್ತು ಕೀರ್ತನಾ ಭಾಗವಹಿಸಿದ್ದರು. ಶಾಲಾ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ಉಪಸ್ಥಿತರಿದ್ದರು.


ಶಿಕ್ಷಕಿ ಶ್ರೀಮತಿ ಗೀತಾ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಚೇತನಾ ವಂದಿಸಿ, ಶ್ರೀಮತಿ ನೀತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್, ಶೇ.10 ಡಿಸ್ಕೌಂಟ್ ಸೇಲ್

Suddi Udaya

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya
error: Content is protected !!