37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಸ್ನಾತ್ತಕೋತ್ತರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಮ್ಯೂಚುವಲ್ ಫಂಡ್ ಹಾಗೂ ಇತರೆ ಶೇರು ಮಾರುಕಟ್ಟೆಯ ಹೂಡಿಕೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಹೂಡಿಕೆ ತಜ್ಞ ಅರ್ವಿನ್ ಡಿಸೋಜ ಇವರು ವಿದ್ಯಾರ್ಥಿಗಳಿಗೆ ಹೂಡಿಕೆ ಮಾಡುವಾಗ ಯೋಚನೆ ಮಾಡಿ ವಿಮರ್ಶೆ ಮಾಡಿ ತುಲನಾತ್ಮಕ ಅಧ್ಯಯನದೊಂದಿಗೆ ಹೂಡಿಕೆ ಮಾಡಬೇಕಾಗುತ್ತದೆ. ಷೇರು ಮಾರುಕಟ್ಟೆಯಲ್ಲಿ ಪ್ರತಿದಿನ ಕ್ಷಣ ಕ್ಷಣಕ್ಕೂ ಏರಿಳಿತಗಳಾಗುತ್ತಿರುತ್ತವೆ, ಅದನ್ನು ಗಮನಿಸಿ ನಾವು ಹೂಡಿಕೆ ಮಾಡಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ., ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಕೆ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ| ರವಿ ಎಮ್ ಏನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಎಂಕಾಂ ನ ಕುಮಾರಿ ಅನನ್ಯ ಜೈನ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya
error: Content is protected !!