ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ನಾರಾವಿ ಕಾರ್ಯಕ್ಷೇತ್ರದ ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಯೋಜನೆಯ ವತಿಯಿಂದ ದೊರೆತ ರೂ. 174000 ಮೌಲ್ಯದ 20 ಜೊತೆ ಬೆಂಚು ಡೆಸ್ಕ್ ವಿತರಣಾ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿದರು.
ನಾರಾವಿ ವಲಯದ 7 ಶಾಲೆಗಳಿಗೆ 70 ಜೊತೆ ಬೆಂಚು ಡೆಸ್ಕ್ ವಿತರಣೆ ಆಗಿದ್ದು ಒಟ್ಟು ರೂ.6,09,000 ಮೊತ್ತದ್ದು ಆಗಿರುತ್ತದೆ. ಈ ಸಂದರ್ಭದಲ್ಲಿ ಮೂಡಬಿದ್ರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ , ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ಮರೋಡಿ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ಜಯಂತ್ ಕೋಟ್ಯಾನ್, ನಾರಾವಿ ಕೃಷಿ ಪತ್ತಿನ ಬ್ಯಾಂಕಿನ ಪ್ರಬಂಧಕರಾದ ಶಶಿಕಾಂತ್ ಜೈನ್, ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ವಲಯದ ಮೇಲ್ವಿಚಾರಕಿ ವಿಶಾಲ ಕೆ, ನಾರಾವಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ್ , ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಸುಶೀಲ ಹಾಗೂ ಕೃಷಿ ಪತ್ತಿನ ಎಲ್ಲಾ ನಿರ್ದೇಶಕರು, ಪಂಚಾಯತ್ ನ ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು, ಶಾಲೆಯ ಶಿಕ್ಷಕ ವೃಂದದವರು, ಎಸ್. ಡಿ. ಎಂ.ಸಿ, ಸದಸ್ಯರು, ಪೋಷಕರು, ಸೇವಾಪ್ರತಿನಿಧಿಗಳು, ಹರಿಣಾಕ್ಷಿ ರೇಷ್ಮಾ ವಿ ಎಲ್ ಇ ಅನೀಷ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.