23.4 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ನಾರಾವಿ ಕಾರ್ಯಕ್ಷೇತ್ರದ ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಯೋಜನೆಯ ವತಿಯಿಂದ ದೊರೆತ ರೂ. 174000 ಮೌಲ್ಯದ 20 ಜೊತೆ ಬೆಂಚು ಡೆಸ್ಕ್ ವಿತರಣಾ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ನಾರಾವಿ ವಲಯದ 7 ಶಾಲೆಗಳಿಗೆ 70 ಜೊತೆ ಬೆಂಚು ಡೆಸ್ಕ್ ವಿತರಣೆ ಆಗಿದ್ದು ಒಟ್ಟು ರೂ.6,09,000 ಮೊತ್ತದ್ದು ಆಗಿರುತ್ತದೆ. ಈ ಸಂದರ್ಭದಲ್ಲಿ ಮೂಡಬಿದ್ರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ , ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ಮರೋಡಿ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ಜಯಂತ್ ಕೋಟ್ಯಾನ್, ನಾರಾವಿ ಕೃಷಿ ಪತ್ತಿನ ಬ್ಯಾಂಕಿನ ಪ್ರಬಂಧಕರಾದ ಶಶಿಕಾಂತ್ ಜೈನ್, ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ವಲಯದ ಮೇಲ್ವಿಚಾರಕಿ ವಿಶಾಲ ಕೆ, ನಾರಾವಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ್ , ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಸುಶೀಲ ಹಾಗೂ ಕೃಷಿ ಪತ್ತಿನ ಎಲ್ಲಾ ನಿರ್ದೇಶಕರು, ಪಂಚಾಯತ್ ನ ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು, ಶಾಲೆಯ ಶಿಕ್ಷಕ ವೃಂದದವರು, ಎಸ್. ಡಿ. ಎಂ.ಸಿ, ಸದಸ್ಯರು, ಪೋಷಕರು, ಸೇವಾಪ್ರತಿನಿಧಿಗಳು, ಹರಿಣಾಕ್ಷಿ ರೇಷ್ಮಾ ವಿ ಎಲ್ ಇ ಅನೀಷ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya
error: Content is protected !!