23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ಬೆಳ್ತಂಗಡಿ ತಾಲೂಕು ಪ್ರಿಂಟರ್ಸ್ ಅಶೋಸಿಯೇಷನ್ ನ ಜತೆಕಾರ್ಯದರ್ಶಿ ನಾರಾಯಣ್ ಶೆಟ್ಟಿ ( ನಿಸರ್ಗ ಪ್ರಿಂಟರ್ಸ್ ಸೋಮಂತಡ್ಕ ) ಇವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಲಾಯಿತು.

ಮೂಡಬಿದ್ರೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಎ. ಜೆ. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿ ಪ್ರಸ್ತುತ ಮೂಡಬಿದ್ರೆ ಮಿಜಾರಿನಲ್ಲಿ ಶುಶ್ರೂಷೆ ಪಡೆಯುತ್ತಿರುವ ನಾರಾಯಣ್ ಶೆಟ್ಟಿ (ನಿಸರ್ಗ ಪ್ರಿಂಟರ್ಸ್)ಇವರಲ್ಲಿಗೆ ತೆರಳಿ ಸಹಾಯಧನ ನೀಡಲಾಯಿತು.

ಈ ಸಂಧರ್ಭದಲ್ಲಿ ಅಶೋಸಿಯೇಶನ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಕೋಶಾಧಿಕಾರಿ ಬಾಲಕೃಷ್ಣ(ಅನುಪಮ ಪ್ರಿಂಟರ್ಸ್ ), ಉಪಾಧ್ಯಕ್ಷರಾದ ಅನಿಲ್ (ಅಕ್ಷರ ಪ್ರಿಂಟರ್ಸ್ ), ಜೋಬಿನ್ (ಪ್ರಿಂಟ್ ಪ್ಯಾಲೇಸ್ ) ಉಪಸ್ಥಿತರಿದ್ದರು.

ಅಶೋಸಿಯೇಶನ್ ಕಾರ್ಯದರ್ಶಿ ಅರ್ಪಣ್ ( ಪೂಂಜಶ್ರೀ ಪ್ರಿಂಟರ್ಸ್ ), ಉಪಾಧ್ಯಕ್ಷ ಸುದತ್ ಜೈನ್ (ಪಾರ್ಶ್ವನಾಥ್ ಪ್ರಿಂಟರ್ಸ್) ಹಿರಿಯ ಸಲಹೆಗಾರ ಶೇಖರ್ (ಮಂಜುಶ್ರೀ ಪ್ರಿಂಟರ್ಸ್ ), ಹಿರಿಯ ಸದಸ್ಯರಾದ ರತ್ನವರ್ಮ ಜೈನ್ (ರತ್ನಗಿರಿ ಪ್ರಿಂಟರ್ಸ್ ), ಸದಸ್ಯರುಗಳಾದ ರಾಮಕೃಷ್ಣ (ರಂಗೋಲಿ ಪ್ರಿಂಟರ್ಸ್ ), ಆಕಾಶ್ ( ಪೂಂಜಶ್ರೀ ಫ್ಲೆಕ್ಸ್ )ಪ್ರಸಾದ್ )ಮಧುರ ಪ್ರಿಂಟರ್ಸ್) ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya
error: Content is protected !!