23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

ಉಜಿರೆ: ಸ್ಟಾರ್ಟಅಪ್ ಇನ್ಕುಬೇಶನ್ ಹಾಗೂ ಉದ್ಯಮಶೀಲತೆ ಉತ್ತೇಜಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ನಕ್ಸ್ಟ್‌ಅಲೈನ್ ಮತ್ತು ಟೆಲೊಕ್ವೆನ್ಸ್ ಎಂಬ ಸ್ಟಾರ್ಟಪ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.


“ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ನವೀನ ತಂತ್ರಜ್ಞಾನಗಳಲ್ಲಿ ಅನುಭವ ಪಡೆಯಲು, ಸ್ವ-ಉದ್ಯಮ ಕೈಗೊಳ್ಳಲು ಸಹಾಯವಾಗುವಂತೆ ತಂತ್ರಜ್ಞರಿಂದ ಮಾರ್ಗದರ್ಶನ ಹಾಗೂ ನೈಜ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಿರುವ ಈ ಅವಕಾಶವು ವಿದ್ಯಾರ್ಥಿಗಳನ್ನು ಉದ್ಯೋಗದಾತರನ್ನಾಗಿಯೂ ರೂಪಿಸಲು ಸಹಕಾರಿಯಾಗಿರುತ್ತದೆ” ಎಂದು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಟೆಲೊಕ್ವೆನ್ಸ್ ನ ಮುಖ್ಯ ತಾಂತ್ರಿಕ ಅಧಿಕಾರಿ ಶ್ರೀಮತಿ ಅಕ್ಷತಾ ಜೈನ್, ಪ್ರವೀಣ್ ಗೋರೆ (ಟೆಲೊಕ್ವೆನ್ಸ್), ನಕ್ಸ್ಟ್‌ಅಲೈನ್ ನಿರ್ದೇಶಕ ವಿಜಯ್, ಡಿಲೈತ್‌ನಿರ್ದೇಶಕ ಅರುಣ್ ರಾಜಪುರೋಹಿತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಮತ್ತು ಸ್ಟಾರ್ಟಪ್‌ಸ್ಕ್ವೇರ್ ಸಂಯೋಜಕರಾದ ಡಾ. ಬಸವ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya
error: Content is protected !!