July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

ಉಜಿರೆ: ಸ್ಟಾರ್ಟಅಪ್ ಇನ್ಕುಬೇಶನ್ ಹಾಗೂ ಉದ್ಯಮಶೀಲತೆ ಉತ್ತೇಜಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ನಕ್ಸ್ಟ್‌ಅಲೈನ್ ಮತ್ತು ಟೆಲೊಕ್ವೆನ್ಸ್ ಎಂಬ ಸ್ಟಾರ್ಟಪ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.


“ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ನವೀನ ತಂತ್ರಜ್ಞಾನಗಳಲ್ಲಿ ಅನುಭವ ಪಡೆಯಲು, ಸ್ವ-ಉದ್ಯಮ ಕೈಗೊಳ್ಳಲು ಸಹಾಯವಾಗುವಂತೆ ತಂತ್ರಜ್ಞರಿಂದ ಮಾರ್ಗದರ್ಶನ ಹಾಗೂ ನೈಜ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಿರುವ ಈ ಅವಕಾಶವು ವಿದ್ಯಾರ್ಥಿಗಳನ್ನು ಉದ್ಯೋಗದಾತರನ್ನಾಗಿಯೂ ರೂಪಿಸಲು ಸಹಕಾರಿಯಾಗಿರುತ್ತದೆ” ಎಂದು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಟೆಲೊಕ್ವೆನ್ಸ್ ನ ಮುಖ್ಯ ತಾಂತ್ರಿಕ ಅಧಿಕಾರಿ ಶ್ರೀಮತಿ ಅಕ್ಷತಾ ಜೈನ್, ಪ್ರವೀಣ್ ಗೋರೆ (ಟೆಲೊಕ್ವೆನ್ಸ್), ನಕ್ಸ್ಟ್‌ಅಲೈನ್ ನಿರ್ದೇಶಕ ವಿಜಯ್, ಡಿಲೈತ್‌ನಿರ್ದೇಶಕ ಅರುಣ್ ರಾಜಪುರೋಹಿತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಮತ್ತು ಸ್ಟಾರ್ಟಪ್‌ಸ್ಕ್ವೇರ್ ಸಂಯೋಜಕರಾದ ಡಾ. ಬಸವ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!