ನಾಲ್ಕೂರು:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಬಳಂಜ ವಲಯದ ನಾಲ್ಕೂರು ಕಾರ್ಯಕ್ಷೇತ್ರದ ಹಿರಿಯರಾದ ನೊಣಯ್ಯ ಶೆಟ್ಟಿ ಕುರೆಲ್ಯ, ನಾರಾಯಣ ಪೂಜಾರಿ, ಬಾಬು ಇವರಿಗೆ ಮಂಜೂರಾದ ವಾಕಿಂಗ್ ಸ್ಟಿಕ್ ಗಳನ್ನು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಒಕ್ಕೂಟದ ಉಪಾಧ್ಯಕ್ಷ ಗಿರೀಶ್ ಬಂಗೇರ ನಿಟ್ಟಡ್ಕ, ಬಳಂಜ ವಲಯ ಮೇಲ್ವಿಚಾರಕರಾದ ಶ್ರೀಮತಿ ಪದ್ಮಾವತಿ, ಒಕ್ಕೂಟದ ಕಾರ್ಯದರ್ಶಿ ಸವಿತಾ ಹಾಗೂ ನಾಲ್ಕೂರು & ಬಳಂಜ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.