24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

ಬೆಳ್ತಂಗಡಿ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶಾಲಾ ಕ್ರೀಡಾ ಸಂಘದ ವತಿಯಿಂದ 10 ದಿನದ ಉಚಿತ ಯೋಗ ತರಬೇತಿ ಶಿಬಿರವನ್ನು ಅಂತರಾಷ್ಟ್ರೀಯ ಯೋಗ ತರಬೇತುದಾರರು, ಯೋಗ ಗುರುಗಳಾದ ಕೆ ಅಶೋಕ್ ಕುಮಾರ್ ಉದ್ಘಾಟಿಸಿದರು.


ಯೋಗ ಶಿಬಿರದ ಉದ್ಘಾಟಕರಾಗಿ ಆಗಮಿಸಿ ನಮ್ಮ ದಿನನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಆರೋಗ್ಯಯುತ ಜೀವನಕ್ಕೆ ಯೋಗ ಮತ್ತು ಪ್ರಾಣಾಯಾಮ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ ಆರ್ ರವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಯೋಗ ತರಬೇತುಗಾರರಾಗಿ ಎಸ್.ಡಿ.ಎಮ್ ಬಿ.ಎನ್.ವೈ.ಎಸ್ ಕಾಲೇಜಿನ ವಿದ್ಯಾರ್ಥಿನಿಯರಾದ ಸುಕೇತ, ಪ್ರಾಪ್ತಿ ಮತ್ತು ಕೀರ್ತನಾ ಭಾಗವಹಿಸಿದ್ದರು. ಶಾಲಾ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ಉಪಸ್ಥಿತರಿದ್ದರು.


ಶಿಕ್ಷಕಿ ಶ್ರೀಮತಿ ಗೀತಾ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಚೇತನಾ ವಂದಿಸಿ, ಶ್ರೀಮತಿ ನೀತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya
error: Content is protected !!