July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ


ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ ಮತ್ತು ಕೆರಿಯರ್ ಡೆಸ್ಟಿನಿ ಮಂಗಳೂರು ಸಹಯೋಗದಲ್ಲಿ ಪುತ್ತೂರಿನಲ್ಲಿ ಜೂನ್ 12 ರಂದು ದರ್ಬೆ ಆರಾದ್ಯ ಆರ್ಕೇಡ್‌ನಲ್ಲಿ ಒಂದು ವರ್ಷದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ನ ಮೊದಲ ಬ್ಯಾಚ್ ಪ್ರಾರಂಭವಾಯಿತು. ಹೊಸ ವಿದ್ಯಾರ್ಥಿಗಳನ್ನು ಹೂಗಳನ್ನು ನೀಡಿ ಸ್ವಾಗತಿಸಲಾಯಿತು.


ಅಕ್ಷಯ ಕಾಲೇಜು ಚೇರ್‌ಮ್ಯಾನ್ ಜಯಂತ್ ನಡುಬೈಲು ಮಾತನಾಡಿ, ಭವಿಷ್ಯ ವನ್ನು ಉತ್ತಮ ರೂಪಿಸಲು ಏವಿಯೇನ್ ಕೋರ್ಸ್ ತುಂಬಾ ಒಳ್ಳೆಯದು ಮತ್ತು ವಾಯುಯಾನದಲ್ಲಿ ಉತ್ತಮ ವೃತ್ತಿಜೀವನವನ್ನು ನಿರ್ಮಿಸಲು ನಾವು ಉತ್ತಮ ಸೇವೆಯನ್ನು ಒದಗಿಸುತ್ತೇವೆ ಎಂದು ಅವರು ಶುಭ ಹಾರೈಸಿದರು.


ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ಮೂಲಕ ವಿವಿಧ ಉದ್ಯೋಗಾವಕಾಶಗಳನ್ನು ನಾವು ಹೇಗೆ ಸುಲಭವಾಗಿ ಪಡೆಯಬಹುದು ಮತ್ತು ನಮ್ಮ ತಂಡವು ಹೇಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹ ನೀಡಿ ಉತ್ತಮ ಉದ್ಯೋಗ ಪಡೆಯಲು ಪ್ರೇರೇಪಿಸುದು ಮತ್ತು ಸೃಜನಾತ್ಮಕವಾಗಿ ವಿದ್ಯಾರ್ಥಿಗಳನ್ನುಸಿದ್ಧ ಮಾಡುವುದುನಮ್ಮ ಜವಾಬ್ದಾರಿಯಾಗಿದೆ ಎಂದು ಕೆರಿಯರ್ ಡೆಸ್ಟಿನಿ ಮಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕಿ ಜಯಶ್ರೀ ಹೇಳಿದರು.


ಜುಂಬಾ ಪ್ರಮಾಣೀಕೃತ ಫಿಟ್‌ನೆಸ್ ತರಬೇತುದಾರರಾದ ದೇವಿಪ್ರಸಾದ್ ಮಾತನಾಡಿ, ವಾಯುಯಾನದಲ್ಲಿ ಫಿಟ್‌ನೆಸ್‌ನ ಪ್ರಮುಖ ಅಂಶಗಳ ಬಗ್ಗೆ ವಿವರಿಸಿದರು.


ಇನ್ನೊಬ್ಬ ತರಬೇತುದಾರ ಶ್ರೀ ಶುಭಂ ಕುಲಾಲ್ ಅವರು ವಾಯುಯಾನ ಕ್ಷೇತ್ರದಲ್ಲಿ ಅಗತ್ಯವಿರುವ ಜ್ಞಾನ ಮತ್ತು ಕೌಶಲ್ಯಗಳ ಬಗ್ಗೆ ವಿವರಿಸಿದರು.


ಸಮಾರಂಭದಲ್ಲಿ ಅಕ್ಷಯ ಕಾಲೇಜಿನ ನಿರ್ದೇಶಕರು ಡಾ ಅಕ್ಷಯ್, ಆಡಳಿತಾಧಿಕಾರಿ ಅರ್ಪಿತ್ ಟಿಎ , ಭರತ್ ಒಲ್ತಾಜೆ ಮಾನವ ಸಂಪನ್ಮೂಲ ವ್ಯವಸ್ಥಾಪಕರು ಮತ್ತು ಯಾಮಿನಿ ಎಚ್‌ಆರ್ ಕೋ ಆರ್ಡಿನೇಟರ್ ಉಪಸ್ಥಿತರಿದ್ದರು.

Related posts

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!