July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

ಕೊಕ್ಕಡ : ಇಲ್ಲಿಯ ವೈಷ್ಣವಿ ಕಾಂಪ್ಲೆಕ್ಸ್ ನಲ್ಲಿ ಸತ್ಯ ಸುದ್ದಿ ನ್ಯೂಸ್‌ ಇದರ ಶುಭಾರಂಭವು ಜೂ. 13 ರಂದು ಪಂಚಮಿ ಹಿತಾರ್ಯುಧಾಮದ ಡಾ| ಮೋಹನ್ ದಾಸ್ ಗೌಡ ರಿಬ್ಬನ್‌ ಕತ್ತರಿಸುವ ಮೂಲಕ ಮತ್ತು ಸೌತಡ್ಕ ಮಹಾಗಣಪತಿ ದೇವಸ್ಥಾನದ ಮುಖ್ಯ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನೆಲ್ಯಾಡಿ ಸೈಂಟ್‌ ಅಲ್ಫೋನ್ಸಾ ಚರ್ಚ್‌ ನ ಧರ್ಮಗುರುಗಳಾದ ವಂದನೀಯ ಫಾ| ಮಾಥ್ಯು ವೆಟ್ಟಂತಡತ್ತಿಲ್‌ ವೆಬ್‌ ಸೈಟ್‌ಗೆ ಚಾಲನೆ ನೀಡುವ ಮೂಲಕ ಸತ್ಯ ಸುದ್ದಿ ನ್ಯೂಸ್‌ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್‌ ಕುಮಾರ್‌ , ಕೊಕ್ಕಡ ಕೃಷಿಪತ್ತಿನ ಸಹಕಾರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ, ಉದ್ಯಮಿ ಬಾಲಕೃಷ್ಣ ನೈಮಿಷ ಸೌತಡ್ಕ , ಕೊಕ್ಕಡ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಯೋಗೀಶ್‌ ಆಲಂಬಿಲ , ಉದ್ಯಮಿ ಗಣೇಶ ಗೌಡ ಕಲಾಯಿ , ಎಲ್‌ ಐ ಸಿ ಏಜೆಂಟ್‌ ಉಮೇಶ ಗೌಡ ಕೊಕ್ಕಡ, ಸುರೇಶ ಗೌಡ ಕಲಾಯಿ, ಸಿದ್ದೀಕ್‌ ಪಟ್ಟೂರು, ರಾಜಾ ರಾಮ್‌ ಹೆಬ್ಬಾರ್‌, ಮೋಹನ್‌ ಭಟ್‌, ಹಿರಿಯರಾದ ಪಿ ಪಿ ಫಿಲೋಮಿನ, ಕೃಪಾಮೋಳ್‌ , ವರದಿಗಾರ ಪ್ರಶಾಂತ್‌ ಸಿ ಎಚ್‌ ಉಪಸ್ಥಿತರಿದ್ದು ಶುಭ ಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಆನಂದ ಎನ್.ಎ ಸತ್ಕರಿಸಿ ಸ್ವಾಗತಿಸಿದರು.

Related posts

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya
error: Content is protected !!