30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

ಬೆಳಾಲು: ಪೆರಿಯಡ್ಕ ಸ ಕಿ ಪ್ರಾ ಶಾಲೆಯಲ್ಲಿ ಪ್ರಭಾತ್ ಸಂಸ್ಥೆ ಉಜಿರೆ ಇವರು ನಿರಂತರ 14 ವರ್ಷಗಳಿಂದ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಒದಗಿಸುತ್ತಾ ಬಂದಿದ್ದು ಇದರ ವಿತರಣಾ ಸಮಾರಂಭವು ಜೂ.13ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಭಾತ್ ಸಂಸ್ಥೆಯ ಮಾಲಕರಾದ ಶ್ರೀಮತಿ ಪ್ರಿಯಾಂಕ ಪ್ರವೀಣ್ ಭಟ್ ಹಾಗೂ ಅವರ ಹೆತ್ತವರು, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಎಳ್ಳುಗದ್ದೆ, ಹಳೆಪೇಟೆ ಉಜಿರೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ಕೆ ಎಂ, ಭಾಗವಹಿಸಿದರು.

ಈ ಸಂದರ್ಭದಲ್ಲಿ ಪ್ರಭಾತ್ ಸಂಸ್ಥೆಯ ಮಾಲಕರಾದ ಶ್ರೀಮತಿ ಪ್ರಿಯಾಂಕ ಪ್ರವೀಣ್ ಭಟ್ ಇವರನ್ನು ಶಾಲೆಯ ಪರವಾಗಿ ಗೌರವಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ದಾನಿಗಳಿಗೆ ಶಾಲಾ ವಿದ್ಯಾರ್ಥಿಗಳಾದ ಕುಮಾರಿ ಚಾರ್ವಿ ಹಾಗೂ ಚರಿತ ಕೃತಜ್ಞತೆಗಳನ್ನು ಸಲ್ಲಿಸಿದರು.

ಸಹ ಶಿಕ್ಷಕಿ ಶ್ರೀಮತಿ ಜಯಶ್ರೀ ಬಿ ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷ ಸಂತೋಷ ಮಡಿವಾಳ, ಎಸ್ ಡಿ ಎಂ ಸಿ ಸದಸ್ಯರಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya
error: Content is protected !!