23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

ಮುಂಡಾಜೆ  : ಮುಂಡಾಜೆ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸದಸ್ಯರ ಮಕ್ಕಳಿಗೆ ಎನ್.ಎಸ್.ಗೋಖಲೆ ಸಂಸ್ಮರಣ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ಜೂ 14 ರಂದು  ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆನರಾ ಬ್ಯಾಂಕ್ ನ ನಿವೃತ್ತ ಅಧಿಕಾರಿ ವಾಸುದೇವ ಗೋಖಲೆ ಮಾತನಾಡಿ ನಾವು ಎಲ್ಲೇ ಇದ್ದರೂ ನಮ್ಮ ಊರಿಗೆ ನಮ್ಮಿಂದಾದ ಸೇವೆಯನ್ನು ಪ್ರೀತಿ, ವಿಶ್ವಾಸದಿಂದ ನೀಡಬೇಕು. ವಿದ್ಯಾರ್ಥಿಗಳಲ್ಲಿ ಬ್ಯಾಂಕಿಂಗ್ ವ್ಯವಹಾರದ ಜ್ಞಾನ ಹೆಚ್ಚಾಗಬೇಕಿದೆ. ಪ್ರತಿ ವಿದ್ಯಾರ್ಥಿಯು ಬ್ಯಾಂಕ್ ಅಥವಾ ಸಹಕಾರಿ ಸಂಘಗಳಲ್ಲಿ ಖಾತೆಗಳನ್ನು ತೆರೆದು ಎಳವೆಯಿಂದಲೇ ಉಳಿತಾಯದ ಮಹತ್ವವನ್ನು ತಿಳಿಯಬೇಕು.ಸ್ನೇಹದಿಂದ ಜೀವಿಸಬೇಕೇ ಹೊರತು ಸಂಶಯ ಚಿತ್ತರಾಗಬಾರದು ಎಂದು ಹೇಳಿದರು

ಸಂಘದ ಅಧ್ಯಕ್ಷ ಪ್ರಕಾಶನಾರಾಯಣ ರಾವ್ ಮಾತನಾಡಿ ಆರ್ಥಿಕ ಸಂಕಷ್ಟದಿಂದ ಯಾರೂ ಕೂಡ ಶಿಕ್ಷಣದಿಂದ  ವಂಚಿತರಾಗಬಾರದು ಎಂಬ ಉದ್ದೇಶದಿಂದ ಸಂಘವು ರಿಯಾಯಿತಿ ಬಡ್ಡಿ ದರದಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕೆ ವಿದ್ಯಾಭ್ಯಾಸ ಸಾಲ ನೀಡುವ ಹೊಸ ಯೋಜನೆ ರೂಪಿಸಿದೆ. ಸಂಘದ ಸದಸ್ಯರಿಗೆ ಮೈಲುತುತ್ತು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದನ್ನು ರಸಗೊಬ್ಬರಗಳಿಗೂ ವಿಸ್ತರಿಸುವ ಕುರಿತು ಯೋಜನೆ ರೂಪಿಸಲಾಗಿದೆ ಎಂದರು. ಸಂಘದ ವೃತ್ತಿಪರ ನಿರ್ದೇಶಕ, ಹಿರಿಯ ಸಹಕಾರಿ ನಾರಾಯಣ ಫಡಕೆ ಮಾತನಾಡಿ ಅವಿಭಜಿತ ದ ಕ ಜಿಲ್ಲೆಯಲ್ಲಿ ಎನ್.ಎಸ್. ಗೋಖಲೆ ಅವರು ಸಹಕಾರಿ ಕ್ಷೇತ್ರದ ಮಹಾನ್ ಚೇತನರಾಗಿದ್ದರು .ಅವರು ಮತ್ತು ನಮ್ಮೂರ ಹಿರಿಯರು ಹಾಕಿ ಕೊಟ್ಟ ಭದ್ರಬುನಾದಿಯಿಂದ ಸಂಘವು ಅಭಿವೃದ್ಧಿ ಪಥದಲ್ಲಿ ನಡೆಯುತ್ತಿದೆ ಎಂದರು.ನಿರ್ದೇಶಕ ಕಜೆ ವೆಂಕಟೇಶ್ವರ ಭಟ್ ವಿದ್ಯಾಭ್ಯಾಸ ಸಾಲದ ಮಾಹಿತಿ ನೀಡಿದರು.

ಸಂಘದ ಕಕ್ಕಿಂಜೆ ಶಾಖೆಯ ರಾತ್ರಿ ಕಾವಲುಗಾರ ಮಾಂಕು, ನಿವೃತ್ತಿ ಹೊಂದಿದ್ದು ಅವರನ್ನು ಸಂಘದ ವತಿಯಿಂದ ಬೀಳ್ಕೊಡಲಾಯಿತು.ಈ ಬಾರಿಯ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕಗಳಿಸಿದ ಸಂಘದ ವ್ಯಾಪ್ತಿಯ ಆರು ಗ್ರಾಮಗಳ ಸದಸ್ಯರ 50 ಮಕ್ಕಳಿಗೆ ಎನ್. ಎಸ್. ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಿಸಲಾಯಿತು.

ನಿರ್ದೇಶಕರಾದ  ಅಜಯ್ ಕಲ್ಲಿಕಾಟ್, ಅಶ್ವಿನಿ ಎ.ಹೆಬ್ಬಾರ್,ರವಿ ಪೂಜಾರಿ,ಮೋಹಿನಿ, ಶಿವಪ್ರಸಾದ್, ಶಶಿಧರ ಕಲ್ಮಂಜ, ರಾಘವ ಕಲ್ಮಂಜ, ಸುಮಾ ಗೋಖಲೆ,ವೃತ್ತಿಪರ ನಿರ್ದೇಶಕ ಬಾಬುಗೌಡ , ವೇಂಕಟೇಶ್ ಕಜೆ ಉಪಸ್ಥಿತರಿದ್ದರು.
ನಿರ್ದೇಶಕ ಚೆನ್ನಕೇಶವ ಅರಸಮಜಲು ಸ್ವಾಗತಿಸಿ, ಉಪಾಧ್ಯಕ್ಷ ರಾಘವ ಗೌಡ ಕುಡುಮಡ್ಕ ವಂದಿಸಿದರು. ಸಿಇಒ ಪ್ರಸನ್ನ ಪರಾಂಜಪೆ ಹಾಗೂ ಕಕ್ಕಿಂಜೆ ಶಾಖೆ ಮ್ಯಾನೇಜರ್ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು .

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya
error: Content is protected !!