25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

ಮಚ್ಚಿನ : ಇಲ್ಲಿಯ ಮುಡಿಪಿರೆ ಯಿಂದ ನಾಳ ಹಾಗೂ ಮುಡಿಪಿರೆ ಯಿಂದ ಕುವೆಟ್ಟು ರಸ್ತೆಗಳು ಇತ್ತೀಚಿಗೆ ಕಾಂಕ್ರೀಟ್ ಗೊಂಡು ಲೋಕೋಪಯೋಗಿ ಇಲಾಖೆಯಿಂದ ಮಾರ್ಗಸೂಚಿ ನಾಮಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಊರ ಹೆಸರುಗಳನ್ನು ತಪ್ಪಾಗಿ ಮುದ್ರಿಸಿ ಊರ ಜನರನ್ನು ರೊಚ್ಚಿಗೆಲ್ವಂತೆ ಮಾಡಿದೆ.

ಇರಬೇಕಾದ ಹೆಸರುಗಳು ದೇವರಗುಂಡಿ, ಬರೆಮೇಲು, ಮರ್ಕೆ, ಪುರಳಿ, ಪಂಚಮಲಕೋಡಿ, ಬಿಳಿ ಬೈಲು,
ತಿಮ್ಮನೊಟ್ಟು, ನಾಳ, ದತ್ತ ನಗರ ಕುತ್ತಿನ, ಮುದಲಡ್ಕ ಪಯ್ಯೊಟ್ಟು, ಸಬರಬೈಲು, ಕುವೆಟ್ಟು, ಎಂದು ಆಗಬೇಕು. ಆದರೆ
ರಸ್ತೆಯ ನಾಮಫಲಕವನ್ನು ಲೋಕೋಪಯೋಗಿ ಇಲಾಖೆ ವಿಚಿತ್ರವಾದ ಹೆಸರುಗಳನ್ನು ಬರೆದು ದಾರಿ ತಪ್ಪುವಂತೆ ಮಾಡಿದೆ.

ಈ ನಾಮಫಲಕವನ್ನು ತಕ್ಷಣ ಬದಲಾವಣೆಗೊಳಿಸುವಂತೆ ಇಲಾಖೆಯಲ್ಲಿ ಊರ ಜನರ ಒತ್ತಾಯವಾಗಿದೆ. ( ಜನರು ಕೇಳುವಂತ ಪ್ರಶ್ನೆ ಒಂದು ಮಗುವಿನ ಹೆಸರಿನ ಒಂದು ಅಕ್ಷರವನ್ನು ತಿದ್ದುಪಡಿ ಮಾಡಲು ಶಾಲೆ ಲಾಯರ್ ಕೋರ್ಟು ಕಚೇರಿ ಹೀಗೆ 6ತಿಂಗಳು ಅಲೆದಾಡಿದರು ಸರಿಯಾಗುವುದಿಲ್ಲ ಆದರೆ ಲೋಕೋಪಯೋಗಿ ಇಲಾಖೆ , ಕ್ಷಣಮಾತ್ರದಲ್ಲಿ ಒಂದು ಊರಿನ ಹೆಸರನ್ನು ಬದಲಾವಣೆ ಮಾಡುತ್ತದೆ ಎಂದು ) ಒಟ್ಟಿನಲ್ಲಿ ಮಾರ್ಗಸೂಚಿ ಸರಿಯಾಗಿದ್ದರೆ ಜನರು ದಾರಿ ತಪ್ಪದಂತೆ ಮಾಡಬಹುದು.
✍️ವರದಿ: ಹರ್ಷ ಬಳ್ಳಮಂಜ

Related posts

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!