23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

ಮಚ್ಚಿನ : ಇಲ್ಲಿಯ ಮುಡಿಪಿರೆ ಯಿಂದ ನಾಳ ಹಾಗೂ ಮುಡಿಪಿರೆ ಯಿಂದ ಕುವೆಟ್ಟು ರಸ್ತೆಗಳು ಇತ್ತೀಚಿಗೆ ಕಾಂಕ್ರೀಟ್ ಗೊಂಡು ಲೋಕೋಪಯೋಗಿ ಇಲಾಖೆಯಿಂದ ಮಾರ್ಗಸೂಚಿ ನಾಮಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಊರ ಹೆಸರುಗಳನ್ನು ತಪ್ಪಾಗಿ ಮುದ್ರಿಸಿ ಊರ ಜನರನ್ನು ರೊಚ್ಚಿಗೆಲ್ವಂತೆ ಮಾಡಿದೆ.

ಇರಬೇಕಾದ ಹೆಸರುಗಳು ದೇವರಗುಂಡಿ, ಬರೆಮೇಲು, ಮರ್ಕೆ, ಪುರಳಿ, ಪಂಚಮಲಕೋಡಿ, ಬಿಳಿ ಬೈಲು,
ತಿಮ್ಮನೊಟ್ಟು, ನಾಳ, ದತ್ತ ನಗರ ಕುತ್ತಿನ, ಮುದಲಡ್ಕ ಪಯ್ಯೊಟ್ಟು, ಸಬರಬೈಲು, ಕುವೆಟ್ಟು, ಎಂದು ಆಗಬೇಕು. ಆದರೆ
ರಸ್ತೆಯ ನಾಮಫಲಕವನ್ನು ಲೋಕೋಪಯೋಗಿ ಇಲಾಖೆ ವಿಚಿತ್ರವಾದ ಹೆಸರುಗಳನ್ನು ಬರೆದು ದಾರಿ ತಪ್ಪುವಂತೆ ಮಾಡಿದೆ.

ಈ ನಾಮಫಲಕವನ್ನು ತಕ್ಷಣ ಬದಲಾವಣೆಗೊಳಿಸುವಂತೆ ಇಲಾಖೆಯಲ್ಲಿ ಊರ ಜನರ ಒತ್ತಾಯವಾಗಿದೆ. ( ಜನರು ಕೇಳುವಂತ ಪ್ರಶ್ನೆ ಒಂದು ಮಗುವಿನ ಹೆಸರಿನ ಒಂದು ಅಕ್ಷರವನ್ನು ತಿದ್ದುಪಡಿ ಮಾಡಲು ಶಾಲೆ ಲಾಯರ್ ಕೋರ್ಟು ಕಚೇರಿ ಹೀಗೆ 6ತಿಂಗಳು ಅಲೆದಾಡಿದರು ಸರಿಯಾಗುವುದಿಲ್ಲ ಆದರೆ ಲೋಕೋಪಯೋಗಿ ಇಲಾಖೆ , ಕ್ಷಣಮಾತ್ರದಲ್ಲಿ ಒಂದು ಊರಿನ ಹೆಸರನ್ನು ಬದಲಾವಣೆ ಮಾಡುತ್ತದೆ ಎಂದು ) ಒಟ್ಟಿನಲ್ಲಿ ಮಾರ್ಗಸೂಚಿ ಸರಿಯಾಗಿದ್ದರೆ ಜನರು ದಾರಿ ತಪ್ಪದಂತೆ ಮಾಡಬಹುದು.
✍️ವರದಿ: ಹರ್ಷ ಬಳ್ಳಮಂಜ

Related posts

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya
error: Content is protected !!