25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

ಮಚ್ಚಿನ : ಇಲ್ಲಿಯ ಮುಡಿಪಿರೆ ಯಿಂದ ನಾಳ ಹಾಗೂ ಮುಡಿಪಿರೆ ಯಿಂದ ಕುವೆಟ್ಟು ರಸ್ತೆಗಳು ಇತ್ತೀಚಿಗೆ ಕಾಂಕ್ರೀಟ್ ಗೊಂಡು ಲೋಕೋಪಯೋಗಿ ಇಲಾಖೆಯಿಂದ ಮಾರ್ಗಸೂಚಿ ನಾಮಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಊರ ಹೆಸರುಗಳನ್ನು ತಪ್ಪಾಗಿ ಮುದ್ರಿಸಿ ಊರ ಜನರನ್ನು ರೊಚ್ಚಿಗೆಲ್ವಂತೆ ಮಾಡಿದೆ.

ಇರಬೇಕಾದ ಹೆಸರುಗಳು ದೇವರಗುಂಡಿ, ಬರೆಮೇಲು, ಮರ್ಕೆ, ಪುರಳಿ, ಪಂಚಮಲಕೋಡಿ, ಬಿಳಿ ಬೈಲು,
ತಿಮ್ಮನೊಟ್ಟು, ನಾಳ, ದತ್ತ ನಗರ ಕುತ್ತಿನ, ಮುದಲಡ್ಕ ಪಯ್ಯೊಟ್ಟು, ಸಬರಬೈಲು, ಕುವೆಟ್ಟು, ಎಂದು ಆಗಬೇಕು. ಆದರೆ
ರಸ್ತೆಯ ನಾಮಫಲಕವನ್ನು ಲೋಕೋಪಯೋಗಿ ಇಲಾಖೆ ವಿಚಿತ್ರವಾದ ಹೆಸರುಗಳನ್ನು ಬರೆದು ದಾರಿ ತಪ್ಪುವಂತೆ ಮಾಡಿದೆ.

ಈ ನಾಮಫಲಕವನ್ನು ತಕ್ಷಣ ಬದಲಾವಣೆಗೊಳಿಸುವಂತೆ ಇಲಾಖೆಯಲ್ಲಿ ಊರ ಜನರ ಒತ್ತಾಯವಾಗಿದೆ. ( ಜನರು ಕೇಳುವಂತ ಪ್ರಶ್ನೆ ಒಂದು ಮಗುವಿನ ಹೆಸರಿನ ಒಂದು ಅಕ್ಷರವನ್ನು ತಿದ್ದುಪಡಿ ಮಾಡಲು ಶಾಲೆ ಲಾಯರ್ ಕೋರ್ಟು ಕಚೇರಿ ಹೀಗೆ 6ತಿಂಗಳು ಅಲೆದಾಡಿದರು ಸರಿಯಾಗುವುದಿಲ್ಲ ಆದರೆ ಲೋಕೋಪಯೋಗಿ ಇಲಾಖೆ , ಕ್ಷಣಮಾತ್ರದಲ್ಲಿ ಒಂದು ಊರಿನ ಹೆಸರನ್ನು ಬದಲಾವಣೆ ಮಾಡುತ್ತದೆ ಎಂದು ) ಒಟ್ಟಿನಲ್ಲಿ ಮಾರ್ಗಸೂಚಿ ಸರಿಯಾಗಿದ್ದರೆ ಜನರು ದಾರಿ ತಪ್ಪದಂತೆ ಮಾಡಬಹುದು.
✍️ವರದಿ: ಹರ್ಷ ಬಳ್ಳಮಂಜ

Related posts

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya
error: Content is protected !!