32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

ಮಚ್ಚಿನ : ಇಲ್ಲಿಯ ಮುಡಿಪಿರೆ ಯಿಂದ ನಾಳ ಹಾಗೂ ಮುಡಿಪಿರೆ ಯಿಂದ ಕುವೆಟ್ಟು ರಸ್ತೆಗಳು ಇತ್ತೀಚಿಗೆ ಕಾಂಕ್ರೀಟ್ ಗೊಂಡು ಲೋಕೋಪಯೋಗಿ ಇಲಾಖೆಯಿಂದ ಮಾರ್ಗಸೂಚಿ ನಾಮಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಊರ ಹೆಸರುಗಳನ್ನು ತಪ್ಪಾಗಿ ಮುದ್ರಿಸಿ ಊರ ಜನರನ್ನು ರೊಚ್ಚಿಗೆಲ್ವಂತೆ ಮಾಡಿದೆ.

ಇರಬೇಕಾದ ಹೆಸರುಗಳು ದೇವರಗುಂಡಿ, ಬರೆಮೇಲು, ಮರ್ಕೆ, ಪುರಳಿ, ಪಂಚಮಲಕೋಡಿ, ಬಿಳಿ ಬೈಲು,
ತಿಮ್ಮನೊಟ್ಟು, ನಾಳ, ದತ್ತ ನಗರ ಕುತ್ತಿನ, ಮುದಲಡ್ಕ ಪಯ್ಯೊಟ್ಟು, ಸಬರಬೈಲು, ಕುವೆಟ್ಟು, ಎಂದು ಆಗಬೇಕು. ಆದರೆ
ರಸ್ತೆಯ ನಾಮಫಲಕವನ್ನು ಲೋಕೋಪಯೋಗಿ ಇಲಾಖೆ ವಿಚಿತ್ರವಾದ ಹೆಸರುಗಳನ್ನು ಬರೆದು ದಾರಿ ತಪ್ಪುವಂತೆ ಮಾಡಿದೆ.

ಈ ನಾಮಫಲಕವನ್ನು ತಕ್ಷಣ ಬದಲಾವಣೆಗೊಳಿಸುವಂತೆ ಇಲಾಖೆಯಲ್ಲಿ ಊರ ಜನರ ಒತ್ತಾಯವಾಗಿದೆ. ( ಜನರು ಕೇಳುವಂತ ಪ್ರಶ್ನೆ ಒಂದು ಮಗುವಿನ ಹೆಸರಿನ ಒಂದು ಅಕ್ಷರವನ್ನು ತಿದ್ದುಪಡಿ ಮಾಡಲು ಶಾಲೆ ಲಾಯರ್ ಕೋರ್ಟು ಕಚೇರಿ ಹೀಗೆ 6ತಿಂಗಳು ಅಲೆದಾಡಿದರು ಸರಿಯಾಗುವುದಿಲ್ಲ ಆದರೆ ಲೋಕೋಪಯೋಗಿ ಇಲಾಖೆ , ಕ್ಷಣಮಾತ್ರದಲ್ಲಿ ಒಂದು ಊರಿನ ಹೆಸರನ್ನು ಬದಲಾವಣೆ ಮಾಡುತ್ತದೆ ಎಂದು ) ಒಟ್ಟಿನಲ್ಲಿ ಮಾರ್ಗಸೂಚಿ ಸರಿಯಾಗಿದ್ದರೆ ಜನರು ದಾರಿ ತಪ್ಪದಂತೆ ಮಾಡಬಹುದು.
✍️ವರದಿ: ಹರ್ಷ ಬಳ್ಳಮಂಜ

Related posts

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಪೆರಿಂಜೆ: ಕುರ್ಲೊಟ್ಟು ಸತ್ಯಸಾರಮನಿ ದೈವಸ್ಥಾನಕ್ಕೆ ಮೇಲ್ಛಾವಣಿ ಶಿಲಾನ್ಯಾಸ ಮತ್ತು ಕೃಷ್ಣ ಜನ್ಮಾಷ್ಟಮಿಯ ಕ್ರೀಡಾಕೂಟ

Suddi Udaya
error: Content is protected !!