25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ಸಭೆಯು ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರ ಅಧ್ಯಕ್ಷತೆಯಲ್ಲಿ ಜೂ. 13 ರಂದು ನಡೆಯಿತು.

ಈ ಹಿಂದೆ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದ ಸುಬ್ರಹ್ಮಣ್ಯ ಶಬರಾಯ ಅವರು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನಾಗಿ ಪ್ರಸ್ತುತ ಸಮಿತಿಯ ಉಪಾಧ್ಯಕ್ಷರಾಗಿರುವ ಮತ್ತು ಸೌತಡ್ಕ ದೇಗುಲದ ಅಭಿವೃದ್ದಿಗೆ ನಿರಂತರ ಶ್ರಮಿಸುತ್ತಿರುವ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಇವರನ್ನು ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಸುಬ್ರಹ್ಮಣ್ಯ ಶಬರಾಯ ಅವರನ್ನು ಸಮಿತಿಯ ಗೌರವ ಸಲಹೆಗಾರರನ್ನಾಗಿ ಆಯ್ಕೆ ಮಾಡಲಾಯಿತು. ದೇಗುಲದ ಬಳಕೆಗಾಗಿ ಕಳೆದ 20 ವರ್ಷಗಳ ಹಿಂದೆ ಖರೀದಿಸಲಾಗಿದ್ದ ಜಮೀನನ್ನು ಖಾಸಗಿ ಟ್ರಸ್ಟ್ ಸ್ವಾಧೀನ ಮಾಡಿಕೊಂಡಿದ್ದು, ಇದನ್ನು ಮರಳಿ ದೇಗುಲಕ್ಕೇ ಸಿಗುವಂತೆ ಮಾಡಬೇಕೆಂಬ ನಿಟ್ಟಿನಲ್ಲಿ ಪ್ರಶಾಂತ್ ರೈ ಅವರು ಮುಂಚೂಣಿಯಲ್ಲಿ ಶ್ರಮಿಸಿದವರು ಹಾಗೂ ಸೌತಡ್ಕ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಈ ಹಿಂದೆ ಸೇವ ಸಲ್ಲಿಸಿದವರಾಗಿದ್ದಾರೆ ಹಾಗಾಗಿ ಇವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಸದಸ್ಯರು ಸಭೆಯಲ್ಲಿ ತಿಳಿಸಿದರು.

Related posts

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya
error: Content is protected !!