September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ


ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ ಮತ್ತು ಕೆರಿಯರ್ ಡೆಸ್ಟಿನಿ ಮಂಗಳೂರು ಸಹಯೋಗದಲ್ಲಿ ಪುತ್ತೂರಿನಲ್ಲಿ ಜೂನ್ 12 ರಂದು ದರ್ಬೆ ಆರಾದ್ಯ ಆರ್ಕೇಡ್‌ನಲ್ಲಿ ಒಂದು ವರ್ಷದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ನ ಮೊದಲ ಬ್ಯಾಚ್ ಪ್ರಾರಂಭವಾಯಿತು. ಹೊಸ ವಿದ್ಯಾರ್ಥಿಗಳನ್ನು ಹೂಗಳನ್ನು ನೀಡಿ ಸ್ವಾಗತಿಸಲಾಯಿತು.


ಅಕ್ಷಯ ಕಾಲೇಜು ಚೇರ್‌ಮ್ಯಾನ್ ಜಯಂತ್ ನಡುಬೈಲು ಮಾತನಾಡಿ, ಭವಿಷ್ಯ ವನ್ನು ಉತ್ತಮ ರೂಪಿಸಲು ಏವಿಯೇನ್ ಕೋರ್ಸ್ ತುಂಬಾ ಒಳ್ಳೆಯದು ಮತ್ತು ವಾಯುಯಾನದಲ್ಲಿ ಉತ್ತಮ ವೃತ್ತಿಜೀವನವನ್ನು ನಿರ್ಮಿಸಲು ನಾವು ಉತ್ತಮ ಸೇವೆಯನ್ನು ಒದಗಿಸುತ್ತೇವೆ ಎಂದು ಅವರು ಶುಭ ಹಾರೈಸಿದರು.


ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ಮೂಲಕ ವಿವಿಧ ಉದ್ಯೋಗಾವಕಾಶಗಳನ್ನು ನಾವು ಹೇಗೆ ಸುಲಭವಾಗಿ ಪಡೆಯಬಹುದು ಮತ್ತು ನಮ್ಮ ತಂಡವು ಹೇಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹ ನೀಡಿ ಉತ್ತಮ ಉದ್ಯೋಗ ಪಡೆಯಲು ಪ್ರೇರೇಪಿಸುದು ಮತ್ತು ಸೃಜನಾತ್ಮಕವಾಗಿ ವಿದ್ಯಾರ್ಥಿಗಳನ್ನುಸಿದ್ಧ ಮಾಡುವುದುನಮ್ಮ ಜವಾಬ್ದಾರಿಯಾಗಿದೆ ಎಂದು ಕೆರಿಯರ್ ಡೆಸ್ಟಿನಿ ಮಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕಿ ಜಯಶ್ರೀ ಹೇಳಿದರು.


ಜುಂಬಾ ಪ್ರಮಾಣೀಕೃತ ಫಿಟ್‌ನೆಸ್ ತರಬೇತುದಾರರಾದ ದೇವಿಪ್ರಸಾದ್ ಮಾತನಾಡಿ, ವಾಯುಯಾನದಲ್ಲಿ ಫಿಟ್‌ನೆಸ್‌ನ ಪ್ರಮುಖ ಅಂಶಗಳ ಬಗ್ಗೆ ವಿವರಿಸಿದರು.


ಇನ್ನೊಬ್ಬ ತರಬೇತುದಾರ ಶ್ರೀ ಶುಭಂ ಕುಲಾಲ್ ಅವರು ವಾಯುಯಾನ ಕ್ಷೇತ್ರದಲ್ಲಿ ಅಗತ್ಯವಿರುವ ಜ್ಞಾನ ಮತ್ತು ಕೌಶಲ್ಯಗಳ ಬಗ್ಗೆ ವಿವರಿಸಿದರು.


ಸಮಾರಂಭದಲ್ಲಿ ಅಕ್ಷಯ ಕಾಲೇಜಿನ ನಿರ್ದೇಶಕರು ಡಾ ಅಕ್ಷಯ್, ಆಡಳಿತಾಧಿಕಾರಿ ಅರ್ಪಿತ್ ಟಿಎ , ಭರತ್ ಒಲ್ತಾಜೆ ಮಾನವ ಸಂಪನ್ಮೂಲ ವ್ಯವಸ್ಥಾಪಕರು ಮತ್ತು ಯಾಮಿನಿ ಎಚ್‌ಆರ್ ಕೋ ಆರ್ಡಿನೇಟರ್ ಉಪಸ್ಥಿತರಿದ್ದರು.

Related posts

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya
error: Content is protected !!