July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ


ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ ಮತ್ತು ಕೆರಿಯರ್ ಡೆಸ್ಟಿನಿ ಮಂಗಳೂರು ಸಹಯೋಗದಲ್ಲಿ ಪುತ್ತೂರಿನಲ್ಲಿ ಜೂನ್ 12 ರಂದು ದರ್ಬೆ ಆರಾದ್ಯ ಆರ್ಕೇಡ್‌ನಲ್ಲಿ ಒಂದು ವರ್ಷದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ನ ಮೊದಲ ಬ್ಯಾಚ್ ಪ್ರಾರಂಭವಾಯಿತು. ಹೊಸ ವಿದ್ಯಾರ್ಥಿಗಳನ್ನು ಹೂಗಳನ್ನು ನೀಡಿ ಸ್ವಾಗತಿಸಲಾಯಿತು.


ಅಕ್ಷಯ ಕಾಲೇಜು ಚೇರ್‌ಮ್ಯಾನ್ ಜಯಂತ್ ನಡುಬೈಲು ಮಾತನಾಡಿ, ಭವಿಷ್ಯ ವನ್ನು ಉತ್ತಮ ರೂಪಿಸಲು ಏವಿಯೇನ್ ಕೋರ್ಸ್ ತುಂಬಾ ಒಳ್ಳೆಯದು ಮತ್ತು ವಾಯುಯಾನದಲ್ಲಿ ಉತ್ತಮ ವೃತ್ತಿಜೀವನವನ್ನು ನಿರ್ಮಿಸಲು ನಾವು ಉತ್ತಮ ಸೇವೆಯನ್ನು ಒದಗಿಸುತ್ತೇವೆ ಎಂದು ಅವರು ಶುಭ ಹಾರೈಸಿದರು.


ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ಮೂಲಕ ವಿವಿಧ ಉದ್ಯೋಗಾವಕಾಶಗಳನ್ನು ನಾವು ಹೇಗೆ ಸುಲಭವಾಗಿ ಪಡೆಯಬಹುದು ಮತ್ತು ನಮ್ಮ ತಂಡವು ಹೇಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹ ನೀಡಿ ಉತ್ತಮ ಉದ್ಯೋಗ ಪಡೆಯಲು ಪ್ರೇರೇಪಿಸುದು ಮತ್ತು ಸೃಜನಾತ್ಮಕವಾಗಿ ವಿದ್ಯಾರ್ಥಿಗಳನ್ನುಸಿದ್ಧ ಮಾಡುವುದುನಮ್ಮ ಜವಾಬ್ದಾರಿಯಾಗಿದೆ ಎಂದು ಕೆರಿಯರ್ ಡೆಸ್ಟಿನಿ ಮಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕಿ ಜಯಶ್ರೀ ಹೇಳಿದರು.


ಜುಂಬಾ ಪ್ರಮಾಣೀಕೃತ ಫಿಟ್‌ನೆಸ್ ತರಬೇತುದಾರರಾದ ದೇವಿಪ್ರಸಾದ್ ಮಾತನಾಡಿ, ವಾಯುಯಾನದಲ್ಲಿ ಫಿಟ್‌ನೆಸ್‌ನ ಪ್ರಮುಖ ಅಂಶಗಳ ಬಗ್ಗೆ ವಿವರಿಸಿದರು.


ಇನ್ನೊಬ್ಬ ತರಬೇತುದಾರ ಶ್ರೀ ಶುಭಂ ಕುಲಾಲ್ ಅವರು ವಾಯುಯಾನ ಕ್ಷೇತ್ರದಲ್ಲಿ ಅಗತ್ಯವಿರುವ ಜ್ಞಾನ ಮತ್ತು ಕೌಶಲ್ಯಗಳ ಬಗ್ಗೆ ವಿವರಿಸಿದರು.


ಸಮಾರಂಭದಲ್ಲಿ ಅಕ್ಷಯ ಕಾಲೇಜಿನ ನಿರ್ದೇಶಕರು ಡಾ ಅಕ್ಷಯ್, ಆಡಳಿತಾಧಿಕಾರಿ ಅರ್ಪಿತ್ ಟಿಎ , ಭರತ್ ಒಲ್ತಾಜೆ ಮಾನವ ಸಂಪನ್ಮೂಲ ವ್ಯವಸ್ಥಾಪಕರು ಮತ್ತು ಯಾಮಿನಿ ಎಚ್‌ಆರ್ ಕೋ ಆರ್ಡಿನೇಟರ್ ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಬೆಳಾಲು ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ : ಚಿಕಿತ್ಸೆ ಫಲಕಾರಿಯಾಗದೆ ದಿಯಾನ್ ಸಾವು

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ 3 ಲಕ್ಷ ವೆಚ್ಚದಲ್ಲಿ ಬರೆಯುವ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya
error: Content is protected !!