24 C
ಪುತ್ತೂರು, ಬೆಳ್ತಂಗಡಿ
June 15, 2025
ಶಾಲಾ ಕಾಲೇಜು

ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ-2025 ಓರಿಯಂಟೇಶನ್ ತರಬೇತಿ ಕಾರ್ಯಾಗಾರ

  • ನಮ್ಮ ಕಾಲೇಜಿನ ಶೈಕ್ಷಣಿಕ ಸಾಧನೆಯ ಬಗ್ಗೆ ನಾವು ಹೇಳುವುದಕ್ಕಿಂತ ನಮ್ಮ ಫಲಿತಾಂಶವೇ ಹೇಳುತ್ತದೆ:ಸುಮಂತ್ ಕುಮಾರ್ ಜೈನ್
  • ಅಚಲವಾದ ಗುರಿ ನಮ್ಮಲ್ಲಿದ್ದರೆ ಗೆಲುವನ್ನು ಸುಲಭವಾಗಿ ಸಾಧಿಸಬಹುದು:ಪ್ರೊ.ಬಿವಿ ಸೂರ್ಯನಾರಾಯಣ

ಗುರುವಾಯನಕೆರೆ:ಹಣದ ಹಿಂದೆ ಹೋದವರು ಗೆದ್ದಿಲ್ಲ.ಗುರಿಯ ಹಿಂದೆ ಹೋದವರು ಗೆದ್ದಿದ್ದಾರೆ ಹಾಗೂ ಹಣವನ್ನೂ ಗಳಿಸಿದ್ದಾರೆ. ಹೀಗಾಗಿ ಅಚಲವಾದ ಗುರಿ ನಿಮ್ಮಲ್ಲಿದ್ದರೆ ಗೆಲುವನ್ನು ಸಾಧಿಸಬಹುದು, ಆಗ ತಾನಾಗಿಯೇ ಹಣ ಸಂಪಾದನೆ ಯಾಗುತ್ತದೆ ಎಂದು ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಿವಿ ಸೂರ್ಯನಾರಾಯಣ ಅವರು ಹೇಳಿದರು.

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ‘ ದೃಷ್ಟಿ 2025 ‘ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಓರಿಯಂಟೇಶನ್ ಉದ್ಘಾಟಿಸಿ ಅವರು ಮಾತನಾಡಿದರು.

ಎಕ್ಸೆಲ್ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಕಾಲೇಜಿನ ಶೈಕ್ಷಣಿಕ ಸಾಧನೆಯ ಬಗ್ಗೆ ನಾವು ಹೇಳುವುದಕ್ಕಿಂತ ನಮ್ಮ ಫಲಿತಾಂಶವೇ ಹೇಳುತ್ತದೆ. ವಿಜ್ಞಾನ ವಿಭಾಗದ ಎಲ್ಲಾ ಕೋಚಿಂಗ್ ನಮ್ಮಲ್ಲಿದೆ .ಬಳಸಿಕೊಳ್ಳುವ ಬುದ್ಧಿವಂತಿಕೆ ವಿದ್ಯಾರ್ಥಿಗಳಲ್ಲಿ ಇರಬೇಕು ಎಂದರು.

ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಎಂ ಅವರು ಪ್ರಾಸ್ತಾವಿಕ ಮಾತಿನಲ್ಲಿ, ‘ ಕನಸುಗಳು ನನಸಾಗ ಬೇಕಾದರೆ ಶ್ರಮ ಪಡುವುದನ್ನು ರೂಢಿಸಿ ಕೊಳ್ಳಬೇಕು. ನಿರಂತರವಾದ ಪರಿಶ್ರಮವೇ ನಮ್ಮನ್ನು ಉನ್ನತ ಸ್ಥಾನಕ್ಕೆ ಏರಿಸುತ್ತದೆ‌ ಎಂದು ಹೇಳಿ ಎಲ್ಲರನ್ನು ಸ್ವಾಗತಿಸಿದರು.

ಉಪನ್ಯಾಸಕರಾದ, ಡಾ. ಸತ್ಯ ನಾರಾಯಣ ಭಟ್ – ಸಿ ಇ ಟಿ ,ಪ್ರವೀಣ್ ಪಾಟೀಲ್ – ಜೆ ಇ ಇ,ಶ್ರೀನಿಧಿ ರಾಜ್ ಶೆಟ್ಟಿ – ನೀಟ್,ಜೋಸ್ಟಮ್ ಎ ಟಿ – ಎನ್ ಡಿ ಎ,ವರುಣ್ ದೇವ್ – ನಾಟಾ
ಹಾಗೂ ಪ್ರೊ. ರಾಜು ಬೆಳ್ಳುಂಡಗಿ – ಬಿ ಎಸ್ಸಿ ಅಗ್ರಿ ಬಗ್ಗೆ ಮಾಹಿತಿ ನೀಡಿದರು.

ವಿದ್ಯಾರ್ಥಿನಿಯರಾದ ಗಾಯನ , ಅನುಷ್ಕಾ ಶೆಟ್ಟಿ, ಪ್ರೇಕ್ಷಾ ಜೈನ್, ಸುಭಿಕ್ಷಾ, ಗಾಯತ್ರಿ,ಕೆ, ಚೈತ್ರ ಎಂ.ಜಿ ಪ್ರಾರ್ಥಿಸಿದರು. ಉಪನ್ಯಾಸಕರಾದ ಮೊಹಮ್ಮದ್ ಮನೀರ್ ನಿರೂಪಿಸಿದರು. ದಿಶಾ ವಂದಿಸಿದರು.

Related posts

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya
error: Content is protected !!